ರಾಜ್ಯದಲ್ಲಿ eKYC ಪ್ರಕ್ರಿಯೆ ಪೂರ್ಣಗೊಳಿಸದ ಪಡಿತರ ಚೀಟಿದಾರರ ಸಂಖ್ಯೆ ಇನ್ನೂ ಗಮನಾರ್ಹವಾಗಿದೆ. ಈ ವಿಚಾರದಲ್ಲಿ ಗಂಭೀರ ಚಿಂತೆ ವ್ಯಕ್ತಪಡಿಸಿ, ಈ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಿಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಆಹಾರ, ನಾಗರಿಕ ಸರಬರಾಜು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಮೈಸೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದೆ ಮಾತನಾಡಿದ ಅವರು, ಒಂದು ತಿಂಗಳ ಗಡಿಯನ್ನು ನಿಗದಿ ಮಾಡಿದ್ದು, ಈ ಅವಧಿಯಲ್ಲಿ eKYC ಮುಗಿಸದ ಫಲಾನುಭವಿಗಳ ಪಡಿತರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ ಎಂದರು.
ಯಾವುದೇ ಅನಗತ್ಯ ಪಡಿತರ ಕಾರ್ಡ್ ವಿತರಣೆಯಾದರೆ, ತಕ್ಷಣವೇ ತನಿಖೆ ನಡೆಸಿ ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾವಾರಿಯಾಗಿ ಜಾಗೃತಿ ಸಮಿತಿಗಳನ್ನು ರಚಿಸಿ, ಸಾರ್ವಜನಿಕರಲ್ಲಿ ತಿಳಿವು ಮೂಡಿಸುವ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಹೇಳಿದರು.
ಇದೇ ಸಭೆಯಲ್ಲಿ ಆಹಾರಧಾನ್ಯಗಳ ಸುರಕ್ಷಿತ ಸಂಗ್ರಹಣೆ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಿದ ಧಾನ್ಯಗಳ ನಿರ್ವಹಣೆ, ಗುಡ್ಡ ಪ್ರದೇಶದ ಮನೆಗಳಿಗೆ ಪಡಿತರ ತಲುಪುವ ವ್ಯವಸ್ಥೆ, ಕಾನೂನು ಮಾಪನ ಇಲಾಖೆಗೆ ಬೇಕಾದ ವಾಹನ-ಸಿಬ್ಬಂದಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಸೂಕ್ತ ಸೂಚನೆಗಳು ನೀಡಲಾಯಿತು ಎಂದು ತಿಳಿಸಿದರು.
ಪಡಿತರ ವ್ಯವಸ್ಥೆಯಲ್ಲಿನ ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು ಸಾರ್ವಜನಿಕ ಹಿತವನ್ನು ಕೇಂದ್ರಬಿಂದುಗೊಳಿಸಿಕೊಂಡು ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಈ ಸಭೆಯಲ್ಲಿ ಇಲಾಖೆ ಕಾರ್ಯದರ್ಶಿ ಶ್ರೀ ಮನೋಜ್ ಜೈನ್, ಆಯುಕ್ತ ಶ್ರೀಮತಿ ವಿಜಯ ಜ್ಯೋತ್ಸ್ನಾ, ಆಪ್ತ ಕಾರ್ಯದರ್ಶಿ ಡಾ. ಎಚ್. ನಟರಾಜ್, ನಿಗಮ ನಿರ್ದೇಶಕ ಶ್ರೀ ಜಗದೀಶ್ ಹಾಗೂ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…
ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್…
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…