ರಾಜ್ಯದಲ್ಲಿ eKYC ಪ್ರಕ್ರಿಯೆ ಪೂರ್ಣಗೊಳಿಸದ ಪಡಿತರ ಚೀಟಿದಾರರ ಸಂಖ್ಯೆ ಇನ್ನೂ ಗಮನಾರ್ಹವಾಗಿದೆ. ಈ ವಿಚಾರದಲ್ಲಿ ಗಂಭೀರ ಚಿಂತೆ ವ್ಯಕ್ತಪಡಿಸಿ, ಈ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಿಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಆಹಾರ, ನಾಗರಿಕ ಸರಬರಾಜು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಮೈಸೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದೆ ಮಾತನಾಡಿದ ಅವರು, ಒಂದು ತಿಂಗಳ ಗಡಿಯನ್ನು ನಿಗದಿ ಮಾಡಿದ್ದು, ಈ ಅವಧಿಯಲ್ಲಿ eKYC ಮುಗಿಸದ ಫಲಾನುಭವಿಗಳ ಪಡಿತರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ ಎಂದರು.
ಯಾವುದೇ ಅನಗತ್ಯ ಪಡಿತರ ಕಾರ್ಡ್ ವಿತರಣೆಯಾದರೆ, ತಕ್ಷಣವೇ ತನಿಖೆ ನಡೆಸಿ ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾವಾರಿಯಾಗಿ ಜಾಗೃತಿ ಸಮಿತಿಗಳನ್ನು ರಚಿಸಿ, ಸಾರ್ವಜನಿಕರಲ್ಲಿ ತಿಳಿವು ಮೂಡಿಸುವ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಹೇಳಿದರು.
ಇದೇ ಸಭೆಯಲ್ಲಿ ಆಹಾರಧಾನ್ಯಗಳ ಸುರಕ್ಷಿತ ಸಂಗ್ರಹಣೆ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಿದ ಧಾನ್ಯಗಳ ನಿರ್ವಹಣೆ, ಗುಡ್ಡ ಪ್ರದೇಶದ ಮನೆಗಳಿಗೆ ಪಡಿತರ ತಲುಪುವ ವ್ಯವಸ್ಥೆ, ಕಾನೂನು ಮಾಪನ ಇಲಾಖೆಗೆ ಬೇಕಾದ ವಾಹನ-ಸಿಬ್ಬಂದಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಸೂಕ್ತ ಸೂಚನೆಗಳು ನೀಡಲಾಯಿತು ಎಂದು ತಿಳಿಸಿದರು.
ಪಡಿತರ ವ್ಯವಸ್ಥೆಯಲ್ಲಿನ ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು ಸಾರ್ವಜನಿಕ ಹಿತವನ್ನು ಕೇಂದ್ರಬಿಂದುಗೊಳಿಸಿಕೊಂಡು ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಈ ಸಭೆಯಲ್ಲಿ ಇಲಾಖೆ ಕಾರ್ಯದರ್ಶಿ ಶ್ರೀ ಮನೋಜ್ ಜೈನ್, ಆಯುಕ್ತ ಶ್ರೀಮತಿ ವಿಜಯ ಜ್ಯೋತ್ಸ್ನಾ, ಆಪ್ತ ಕಾರ್ಯದರ್ಶಿ ಡಾ. ಎಚ್. ನಟರಾಜ್, ನಿಗಮ ನಿರ್ದೇಶಕ ಶ್ರೀ ಜಗದೀಶ್ ಹಾಗೂ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…