Categories: ಮೈಸೂರು

eKYC ಮಾಡಿಸದ ಫಲಾನುಭವಿಗಳ ಪಡಿತರವನ್ನು ತಾತ್ಕಾಲಿಕವಾಗಿ ಸ್ಥಗಿತಕ್ಕೆ ಸೂಚನೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ರಾಜ್ಯದಲ್ಲಿ eKYC ಪ್ರಕ್ರಿಯೆ ಪೂರ್ಣಗೊಳಿಸದ ಪಡಿತರ ಚೀಟಿದಾರರ ಸಂಖ್ಯೆ ಇನ್ನೂ ಗಮನಾರ್ಹವಾಗಿದೆ. ಈ ವಿಚಾರದಲ್ಲಿ ಗಂಭೀರ ಚಿಂತೆ ವ್ಯಕ್ತಪಡಿಸಿ, ಈ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಿಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಆಹಾರ, ನಾಗರಿಕ ಸರಬರಾಜು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಮೈಸೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದೆ ಮಾತನಾಡಿದ ಅವರು, ಒಂದು ತಿಂಗಳ ಗಡಿಯನ್ನು ನಿಗದಿ ಮಾಡಿದ್ದು, ಈ ಅವಧಿಯಲ್ಲಿ eKYC ಮುಗಿಸದ ಫಲಾನುಭವಿಗಳ ಪಡಿತರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ ಎಂದರು.

ಯಾವುದೇ ಅನಗತ್ಯ ಪಡಿತರ ಕಾರ್ಡ್ ವಿತರಣೆಯಾದರೆ, ತಕ್ಷಣವೇ ತನಿಖೆ ನಡೆಸಿ ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾವಾರಿಯಾಗಿ ಜಾಗೃತಿ ಸಮಿತಿಗಳನ್ನು ರಚಿಸಿ, ಸಾರ್ವಜನಿಕರಲ್ಲಿ ತಿಳಿವು ಮೂಡಿಸುವ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಹೇಳಿದರು‌.

ಇದೇ ಸಭೆಯಲ್ಲಿ ಆಹಾರಧಾನ್ಯಗಳ ಸುರಕ್ಷಿತ ಸಂಗ್ರಹಣೆ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಿದ ಧಾನ್ಯಗಳ ನಿರ್ವಹಣೆ, ಗುಡ್ಡ ಪ್ರದೇಶದ ಮನೆಗಳಿಗೆ ಪಡಿತರ ತಲುಪುವ ವ್ಯವಸ್ಥೆ, ಕಾನೂನು ಮಾಪನ ಇಲಾಖೆಗೆ ಬೇಕಾದ ವಾಹನ-ಸಿಬ್ಬಂದಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಸೂಕ್ತ ಸೂಚನೆಗಳು ನೀಡಲಾಯಿತು ಎಂದು ತಿಳಿಸಿದರು.

ಪಡಿತರ ವ್ಯವಸ್ಥೆಯಲ್ಲಿನ ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು ಸಾರ್ವಜನಿಕ ಹಿತವನ್ನು ಕೇಂದ್ರಬಿಂದುಗೊಳಿಸಿಕೊಂಡು ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಈ ಸಭೆಯಲ್ಲಿ ಇಲಾಖೆ ಕಾರ್ಯದರ್ಶಿ ಶ್ರೀ ಮನೋಜ್ ಜೈನ್, ಆಯುಕ್ತ ಶ್ರೀಮತಿ ವಿಜಯ ಜ್ಯೋತ್ಸ್ನಾ, ಆಪ್ತ ಕಾರ್ಯದರ್ಶಿ ಡಾ. ಎಚ್. ನಟರಾಜ್, ನಿಗಮ ನಿರ್ದೇಶಕ ಶ್ರೀ ಜಗದೀಶ್ ಹಾಗೂ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 hour ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

3 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

4 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

11 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago