ದೇಶದಲ್ಲಿ ಕೋವಿಡ್ 19 ಸಾಂಕ್ರಾಮಿಕದ ಬಳಿಕ ಈಗ ಎಚ್3ಎನ್2 ಅಥವಾ ಇನ್ಫ್ಲೂಯೆಂಜಾ ವೈರಸ್ ಭೀತಿ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಎಚ್3ಎನ್2 ವೈರಸ್ಗೆ ದೇಶದಲ್ಲಿ ಮೊದಲ ಎರಡು ಸಾವುಗಳು ವರದಿಯಾಗಿವೆ. ಕರ್ನಾಟಕದಲ್ಲಿ ಒಬ್ಬರು ಮತ್ತು ಹರಿಯಾಣದಲ್ಲಿ ಒಬ್ಬರು ವೈರಸ್ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.
ದೇಶದಲ್ಲಿ ಸುಮಾರು 90 ಎಚ್3ಎನ್2 ಪ್ರಕರಣಗಳು ಈವರೆಗೂ ದಾಖಲಾಗಿವೆ. ಇದಲ್ಲದೆ ಎಚ್1ಎನ್1 (ಹಂದಿ ಜ್ವರ) ವೈರಸ್ನ ಎಂಟು ಪ್ರಕರಣಗಳು ಕೂಡ ವರದಿಯಾಗಿವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಹಾಂಕಾಂಗ್ ಫ್ಲೂ ಎಂದೂ ಕರೆಯಲಾಗುವ ವೈರಸ್ಗೆ ರಾಜ್ಯದ ಹಾಸನದಲ್ಲಿ ಒಬ್ಬರು ಬಲಿಯಾಗಿದ್ದಾರೆ. ಮತ್ತೊಂದು ಸಾವು ಹರಿಯಾಣದಲ್ಲಿ ದಾಖಲಾಗಿದೆ.
ಜ್ವರ, ನಿರಂತರ ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಉಬ್ಬಸ ಇದರ ಸಾಮಾನ್ಯ ಲಕ್ಷಣಗಳಿಂದ ಈ ರೋಗ ಬರುತ್ತದೆ. ಇದರ ಜತೆಗೆ ವಾಕರಿಕೆ, ಗಂಟಲು ನೋವು, ಮೈಕೈ ನೋವು ಮತ್ತು ಅತಿಸಾರದ ಸಮಸ್ಯೆಗಳನ್ನೂ ರೋಗಿಗಳು ಅನುಭವಿಸುತ್ತಿದ್ದಾರೆ. ಈ ಲಕ್ಷಣಗಳು ಒಂದು ವಾರದವರೆಗೂ ನಿರಂತರವಾಗಿ ಕಾಡುವ ಅಪಾಯವಿದೆ.
ಈ ವೈರಸ್ ಹೆಚ್ಚು ಅಪಾಯಕಾರಿಯಾಗಿದ್ದು, ಕೆಮ್ಮು, ಸೀನು ಹಾಗೂ ಸೋಂಕಿತ ಜನರೊಂದಿಗಿನ ಸಂಪರ್ಕದಿಂದ ಹರಡುತ್ತದೆ. ಇದರಿಂದ ರಕ್ಷಣೆ ಪಡೆಯಲು ಕೋವಿಡ್ ಮಾದರಿಯ ಕ್ರಮಗಳನ್ನೇ ಅನುಸರಿಸಬೇಕು ಎಂದು ವೈದ್ಯರು ಸಲಹೆ ನೀಡುತ್ತಿದ್ದಾರೆ.
ಜನರು ನಿರಂತರವಾಗಿ ಕೈಗಳನ್ನು ತೊಳೆದುಕೊಳ್ಳುತ್ತಿರಬೇಕು ಮತ್ತು ಮಾಸ್ಕ್ ಧರಿಸಬೇಕು. ಸೀನುವಾಗ ಮತ್ತು ಕೆಮ್ಮುವಾಗ ಜನರು ಮುಖ ಹಾಗೂ ಮೂಗನ್ನು ಮುಚ್ಚಿಕೊಳ್ಳಬೇಕು. ಯಥೇಚ್ಛವಾಗಿ ನೀರು ಕುಡಿಯಬೇಕು. ಕಣ್ಣು ಮತ್ತು ಮೂಗನ್ನು ಮುಟ್ಟದಂತೆ ಎಚ್ಚರ ವಹಿಸಬೇಕು. ಜ್ವರ ಹಾಗೂ ದೇಹದ ನೋವಿಗೆ ಪ್ಯಾರಾಸಿಟಮಾಲ್ ತೆಗೆದುಕೊಳ್ಳಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಸಲಹೆ ನೀಡಿದೆ.
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…