ದೇಶದಲ್ಲಿ ಕೋವಿಡ್ 19 ಸಾಂಕ್ರಾಮಿಕದ ಬಳಿಕ ಈಗ ಎಚ್3ಎನ್2 ಅಥವಾ ಇನ್ಫ್ಲೂಯೆಂಜಾ ವೈರಸ್ ಭೀತಿ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಎಚ್3ಎನ್2 ವೈರಸ್ಗೆ ದೇಶದಲ್ಲಿ ಮೊದಲ ಎರಡು ಸಾವುಗಳು ವರದಿಯಾಗಿವೆ. ಕರ್ನಾಟಕದಲ್ಲಿ ಒಬ್ಬರು ಮತ್ತು ಹರಿಯಾಣದಲ್ಲಿ ಒಬ್ಬರು ವೈರಸ್ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.
ದೇಶದಲ್ಲಿ ಸುಮಾರು 90 ಎಚ್3ಎನ್2 ಪ್ರಕರಣಗಳು ಈವರೆಗೂ ದಾಖಲಾಗಿವೆ. ಇದಲ್ಲದೆ ಎಚ್1ಎನ್1 (ಹಂದಿ ಜ್ವರ) ವೈರಸ್ನ ಎಂಟು ಪ್ರಕರಣಗಳು ಕೂಡ ವರದಿಯಾಗಿವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಹಾಂಕಾಂಗ್ ಫ್ಲೂ ಎಂದೂ ಕರೆಯಲಾಗುವ ವೈರಸ್ಗೆ ರಾಜ್ಯದ ಹಾಸನದಲ್ಲಿ ಒಬ್ಬರು ಬಲಿಯಾಗಿದ್ದಾರೆ. ಮತ್ತೊಂದು ಸಾವು ಹರಿಯಾಣದಲ್ಲಿ ದಾಖಲಾಗಿದೆ.
ಜ್ವರ, ನಿರಂತರ ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಉಬ್ಬಸ ಇದರ ಸಾಮಾನ್ಯ ಲಕ್ಷಣಗಳಿಂದ ಈ ರೋಗ ಬರುತ್ತದೆ. ಇದರ ಜತೆಗೆ ವಾಕರಿಕೆ, ಗಂಟಲು ನೋವು, ಮೈಕೈ ನೋವು ಮತ್ತು ಅತಿಸಾರದ ಸಮಸ್ಯೆಗಳನ್ನೂ ರೋಗಿಗಳು ಅನುಭವಿಸುತ್ತಿದ್ದಾರೆ. ಈ ಲಕ್ಷಣಗಳು ಒಂದು ವಾರದವರೆಗೂ ನಿರಂತರವಾಗಿ ಕಾಡುವ ಅಪಾಯವಿದೆ.
ಈ ವೈರಸ್ ಹೆಚ್ಚು ಅಪಾಯಕಾರಿಯಾಗಿದ್ದು, ಕೆಮ್ಮು, ಸೀನು ಹಾಗೂ ಸೋಂಕಿತ ಜನರೊಂದಿಗಿನ ಸಂಪರ್ಕದಿಂದ ಹರಡುತ್ತದೆ. ಇದರಿಂದ ರಕ್ಷಣೆ ಪಡೆಯಲು ಕೋವಿಡ್ ಮಾದರಿಯ ಕ್ರಮಗಳನ್ನೇ ಅನುಸರಿಸಬೇಕು ಎಂದು ವೈದ್ಯರು ಸಲಹೆ ನೀಡುತ್ತಿದ್ದಾರೆ.
ಜನರು ನಿರಂತರವಾಗಿ ಕೈಗಳನ್ನು ತೊಳೆದುಕೊಳ್ಳುತ್ತಿರಬೇಕು ಮತ್ತು ಮಾಸ್ಕ್ ಧರಿಸಬೇಕು. ಸೀನುವಾಗ ಮತ್ತು ಕೆಮ್ಮುವಾಗ ಜನರು ಮುಖ ಹಾಗೂ ಮೂಗನ್ನು ಮುಚ್ಚಿಕೊಳ್ಳಬೇಕು. ಯಥೇಚ್ಛವಾಗಿ ನೀರು ಕುಡಿಯಬೇಕು. ಕಣ್ಣು ಮತ್ತು ಮೂಗನ್ನು ಮುಟ್ಟದಂತೆ ಎಚ್ಚರ ವಹಿಸಬೇಕು. ಜ್ವರ ಹಾಗೂ ದೇಹದ ನೋವಿಗೆ ಪ್ಯಾರಾಸಿಟಮಾಲ್ ತೆಗೆದುಕೊಳ್ಳಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಸಲಹೆ ನೀಡಿದೆ.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…