H3N2ಗೆ ಕರ್ನಾಟಕದಲ್ಲಿ ಮೊದಲ ಬಲಿ: ಕರ್ನಾಟಕ-ಹರಿಯಾಣದಲ್ಲಿ ತಲಾ 1 ಸಾವು

ದೇಶದಲ್ಲಿ ಕೋವಿಡ್ 19 ಸಾಂಕ್ರಾಮಿಕದ ಬಳಿಕ ಈಗ ಎಚ್‌3ಎನ್‌2 ಅಥವಾ ಇನ್‌ಫ್ಲೂಯೆಂಜಾ ವೈರಸ್ ಭೀತಿ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ‌ ಮಾಡಿದೆ. ಎಚ್‌3ಎನ್2 ವೈರಸ್‌ಗೆ ದೇಶದಲ್ಲಿ ಮೊದಲ ಎರಡು ಸಾವುಗಳು ವರದಿಯಾಗಿವೆ. ಕರ್ನಾಟಕದಲ್ಲಿ ಒಬ್ಬರು ಮತ್ತು ಹರಿಯಾಣದಲ್ಲಿ ಒಬ್ಬರು ವೈರಸ್‌ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.

ದೇಶದಲ್ಲಿ ಸುಮಾರು 90 ಎಚ್‌3ಎನ್‌2 ಪ್ರಕರಣಗಳು ಈವರೆಗೂ ದಾಖಲಾಗಿವೆ. ಇದಲ್ಲದೆ ಎಚ್‌1ಎನ್1 (ಹಂದಿ ಜ್ವರ) ವೈರಸ್‌ನ ಎಂಟು ಪ್ರಕರಣಗಳು ಕೂಡ ವರದಿಯಾಗಿವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಹಾಂಕಾಂಗ್ ಫ್ಲೂ ಎಂದೂ ಕರೆಯಲಾಗುವ ವೈರಸ್‌ಗೆ ರಾಜ್ಯದ ಹಾಸನದಲ್ಲಿ ಒಬ್ಬರು ಬಲಿಯಾಗಿದ್ದಾರೆ. ಮತ್ತೊಂದು ಸಾವು ಹರಿಯಾಣದಲ್ಲಿ ದಾಖಲಾಗಿದೆ.

ಜ್ವರ, ನಿರಂತರ ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಉಬ್ಬಸ ಇದರ ಸಾಮಾನ್ಯ ಲಕ್ಷಣಗಳಿಂದ ಈ ರೋಗ‌ ಬರುತ್ತದೆ. ಇದರ ಜತೆಗೆ ವಾಕರಿಕೆ, ಗಂಟಲು ನೋವು, ಮೈಕೈ ನೋವು ಮತ್ತು ಅತಿಸಾರದ ಸಮಸ್ಯೆಗಳನ್ನೂ ರೋಗಿಗಳು ಅನುಭವಿಸುತ್ತಿದ್ದಾರೆ. ಈ ಲಕ್ಷಣಗಳು ಒಂದು ವಾರದವರೆಗೂ ನಿರಂತರವಾಗಿ ಕಾಡುವ ಅಪಾಯವಿದೆ.

ಈ ವೈರಸ್ ಹೆಚ್ಚು ಅಪಾಯಕಾರಿಯಾಗಿದ್ದು, ಕೆಮ್ಮು, ಸೀನು ಹಾಗೂ ಸೋಂಕಿತ ಜನರೊಂದಿಗಿನ ಸಂಪರ್ಕದಿಂದ ಹರಡುತ್ತದೆ. ಇದರಿಂದ ರಕ್ಷಣೆ ಪಡೆಯಲು ಕೋವಿಡ್ ಮಾದರಿಯ ಕ್ರಮಗಳನ್ನೇ ಅನುಸರಿಸಬೇಕು ಎಂದು ವೈದ್ಯರು ಸಲಹೆ ನೀಡುತ್ತಿದ್ದಾರೆ.

ಜನರು ನಿರಂತರವಾಗಿ ಕೈಗಳನ್ನು ತೊಳೆದುಕೊಳ್ಳುತ್ತಿರಬೇಕು ಮತ್ತು ಮಾಸ್ಕ್‌ ಧರಿಸಬೇಕು. ಸೀನುವಾಗ ಮತ್ತು ಕೆಮ್ಮುವಾಗ ಜನರು ಮುಖ ಹಾಗೂ ಮೂಗನ್ನು ಮುಚ್ಚಿಕೊಳ್ಳಬೇಕು. ಯಥೇಚ್ಛವಾಗಿ ನೀರು ಕುಡಿಯಬೇಕು. ಕಣ್ಣು ಮತ್ತು ಮೂಗನ್ನು ಮುಟ್ಟದಂತೆ ಎಚ್ಚರ ವಹಿಸಬೇಕು. ಜ್ವರ ಹಾಗೂ ದೇಹದ ನೋವಿಗೆ ಪ್ಯಾರಾಸಿಟಮಾಲ್ ತೆಗೆದುಕೊಳ್ಳಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಸಲಹೆ ನೀಡಿದೆ.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

29 minutes ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

5 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

9 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago