ದೇಶದಲ್ಲಿ ಕೋವಿಡ್ 19 ಸಾಂಕ್ರಾಮಿಕದ ಬಳಿಕ ಈಗ ಎಚ್3ಎನ್2 ಅಥವಾ ಇನ್ಫ್ಲೂಯೆಂಜಾ ವೈರಸ್ ಭೀತಿ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಎಚ್3ಎನ್2 ವೈರಸ್ಗೆ ದೇಶದಲ್ಲಿ ಮೊದಲ ಎರಡು ಸಾವುಗಳು ವರದಿಯಾಗಿವೆ. ಕರ್ನಾಟಕದಲ್ಲಿ ಒಬ್ಬರು ಮತ್ತು ಹರಿಯಾಣದಲ್ಲಿ ಒಬ್ಬರು ವೈರಸ್ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.
ದೇಶದಲ್ಲಿ ಸುಮಾರು 90 ಎಚ್3ಎನ್2 ಪ್ರಕರಣಗಳು ಈವರೆಗೂ ದಾಖಲಾಗಿವೆ. ಇದಲ್ಲದೆ ಎಚ್1ಎನ್1 (ಹಂದಿ ಜ್ವರ) ವೈರಸ್ನ ಎಂಟು ಪ್ರಕರಣಗಳು ಕೂಡ ವರದಿಯಾಗಿವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಹಾಂಕಾಂಗ್ ಫ್ಲೂ ಎಂದೂ ಕರೆಯಲಾಗುವ ವೈರಸ್ಗೆ ರಾಜ್ಯದ ಹಾಸನದಲ್ಲಿ ಒಬ್ಬರು ಬಲಿಯಾಗಿದ್ದಾರೆ. ಮತ್ತೊಂದು ಸಾವು ಹರಿಯಾಣದಲ್ಲಿ ದಾಖಲಾಗಿದೆ.
ಜ್ವರ, ನಿರಂತರ ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಉಬ್ಬಸ ಇದರ ಸಾಮಾನ್ಯ ಲಕ್ಷಣಗಳಿಂದ ಈ ರೋಗ ಬರುತ್ತದೆ. ಇದರ ಜತೆಗೆ ವಾಕರಿಕೆ, ಗಂಟಲು ನೋವು, ಮೈಕೈ ನೋವು ಮತ್ತು ಅತಿಸಾರದ ಸಮಸ್ಯೆಗಳನ್ನೂ ರೋಗಿಗಳು ಅನುಭವಿಸುತ್ತಿದ್ದಾರೆ. ಈ ಲಕ್ಷಣಗಳು ಒಂದು ವಾರದವರೆಗೂ ನಿರಂತರವಾಗಿ ಕಾಡುವ ಅಪಾಯವಿದೆ.
ಈ ವೈರಸ್ ಹೆಚ್ಚು ಅಪಾಯಕಾರಿಯಾಗಿದ್ದು, ಕೆಮ್ಮು, ಸೀನು ಹಾಗೂ ಸೋಂಕಿತ ಜನರೊಂದಿಗಿನ ಸಂಪರ್ಕದಿಂದ ಹರಡುತ್ತದೆ. ಇದರಿಂದ ರಕ್ಷಣೆ ಪಡೆಯಲು ಕೋವಿಡ್ ಮಾದರಿಯ ಕ್ರಮಗಳನ್ನೇ ಅನುಸರಿಸಬೇಕು ಎಂದು ವೈದ್ಯರು ಸಲಹೆ ನೀಡುತ್ತಿದ್ದಾರೆ.
ಜನರು ನಿರಂತರವಾಗಿ ಕೈಗಳನ್ನು ತೊಳೆದುಕೊಳ್ಳುತ್ತಿರಬೇಕು ಮತ್ತು ಮಾಸ್ಕ್ ಧರಿಸಬೇಕು. ಸೀನುವಾಗ ಮತ್ತು ಕೆಮ್ಮುವಾಗ ಜನರು ಮುಖ ಹಾಗೂ ಮೂಗನ್ನು ಮುಚ್ಚಿಕೊಳ್ಳಬೇಕು. ಯಥೇಚ್ಛವಾಗಿ ನೀರು ಕುಡಿಯಬೇಕು. ಕಣ್ಣು ಮತ್ತು ಮೂಗನ್ನು ಮುಟ್ಟದಂತೆ ಎಚ್ಚರ ವಹಿಸಬೇಕು. ಜ್ವರ ಹಾಗೂ ದೇಹದ ನೋವಿಗೆ ಪ್ಯಾರಾಸಿಟಮಾಲ್ ತೆಗೆದುಕೊಳ್ಳಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಸಲಹೆ ನೀಡಿದೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…