H3N2ಗೆ ಕರ್ನಾಟಕದಲ್ಲಿ ಮೊದಲ ಬಲಿ: ಕರ್ನಾಟಕ-ಹರಿಯಾಣದಲ್ಲಿ ತಲಾ 1 ಸಾವು

ದೇಶದಲ್ಲಿ ಕೋವಿಡ್ 19 ಸಾಂಕ್ರಾಮಿಕದ ಬಳಿಕ ಈಗ ಎಚ್‌3ಎನ್‌2 ಅಥವಾ ಇನ್‌ಫ್ಲೂಯೆಂಜಾ ವೈರಸ್ ಭೀತಿ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ‌ ಮಾಡಿದೆ. ಎಚ್‌3ಎನ್2 ವೈರಸ್‌ಗೆ ದೇಶದಲ್ಲಿ ಮೊದಲ ಎರಡು ಸಾವುಗಳು ವರದಿಯಾಗಿವೆ. ಕರ್ನಾಟಕದಲ್ಲಿ ಒಬ್ಬರು ಮತ್ತು ಹರಿಯಾಣದಲ್ಲಿ ಒಬ್ಬರು ವೈರಸ್‌ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.

ದೇಶದಲ್ಲಿ ಸುಮಾರು 90 ಎಚ್‌3ಎನ್‌2 ಪ್ರಕರಣಗಳು ಈವರೆಗೂ ದಾಖಲಾಗಿವೆ. ಇದಲ್ಲದೆ ಎಚ್‌1ಎನ್1 (ಹಂದಿ ಜ್ವರ) ವೈರಸ್‌ನ ಎಂಟು ಪ್ರಕರಣಗಳು ಕೂಡ ವರದಿಯಾಗಿವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಹಾಂಕಾಂಗ್ ಫ್ಲೂ ಎಂದೂ ಕರೆಯಲಾಗುವ ವೈರಸ್‌ಗೆ ರಾಜ್ಯದ ಹಾಸನದಲ್ಲಿ ಒಬ್ಬರು ಬಲಿಯಾಗಿದ್ದಾರೆ. ಮತ್ತೊಂದು ಸಾವು ಹರಿಯಾಣದಲ್ಲಿ ದಾಖಲಾಗಿದೆ.

ಜ್ವರ, ನಿರಂತರ ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಉಬ್ಬಸ ಇದರ ಸಾಮಾನ್ಯ ಲಕ್ಷಣಗಳಿಂದ ಈ ರೋಗ‌ ಬರುತ್ತದೆ. ಇದರ ಜತೆಗೆ ವಾಕರಿಕೆ, ಗಂಟಲು ನೋವು, ಮೈಕೈ ನೋವು ಮತ್ತು ಅತಿಸಾರದ ಸಮಸ್ಯೆಗಳನ್ನೂ ರೋಗಿಗಳು ಅನುಭವಿಸುತ್ತಿದ್ದಾರೆ. ಈ ಲಕ್ಷಣಗಳು ಒಂದು ವಾರದವರೆಗೂ ನಿರಂತರವಾಗಿ ಕಾಡುವ ಅಪಾಯವಿದೆ.

ಈ ವೈರಸ್ ಹೆಚ್ಚು ಅಪಾಯಕಾರಿಯಾಗಿದ್ದು, ಕೆಮ್ಮು, ಸೀನು ಹಾಗೂ ಸೋಂಕಿತ ಜನರೊಂದಿಗಿನ ಸಂಪರ್ಕದಿಂದ ಹರಡುತ್ತದೆ. ಇದರಿಂದ ರಕ್ಷಣೆ ಪಡೆಯಲು ಕೋವಿಡ್ ಮಾದರಿಯ ಕ್ರಮಗಳನ್ನೇ ಅನುಸರಿಸಬೇಕು ಎಂದು ವೈದ್ಯರು ಸಲಹೆ ನೀಡುತ್ತಿದ್ದಾರೆ.

ಜನರು ನಿರಂತರವಾಗಿ ಕೈಗಳನ್ನು ತೊಳೆದುಕೊಳ್ಳುತ್ತಿರಬೇಕು ಮತ್ತು ಮಾಸ್ಕ್‌ ಧರಿಸಬೇಕು. ಸೀನುವಾಗ ಮತ್ತು ಕೆಮ್ಮುವಾಗ ಜನರು ಮುಖ ಹಾಗೂ ಮೂಗನ್ನು ಮುಚ್ಚಿಕೊಳ್ಳಬೇಕು. ಯಥೇಚ್ಛವಾಗಿ ನೀರು ಕುಡಿಯಬೇಕು. ಕಣ್ಣು ಮತ್ತು ಮೂಗನ್ನು ಮುಟ್ಟದಂತೆ ಎಚ್ಚರ ವಹಿಸಬೇಕು. ಜ್ವರ ಹಾಗೂ ದೇಹದ ನೋವಿಗೆ ಪ್ಯಾರಾಸಿಟಮಾಲ್ ತೆಗೆದುಕೊಳ್ಳಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಸಲಹೆ ನೀಡಿದೆ.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

2 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

2 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

3 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

4 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

7 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

7 hours ago