H3N2ಗೆ ಕರ್ನಾಟಕದಲ್ಲಿ ಮೊದಲ ಬಲಿ: ಕರ್ನಾಟಕ-ಹರಿಯಾಣದಲ್ಲಿ ತಲಾ 1 ಸಾವು

ದೇಶದಲ್ಲಿ ಕೋವಿಡ್ 19 ಸಾಂಕ್ರಾಮಿಕದ ಬಳಿಕ ಈಗ ಎಚ್‌3ಎನ್‌2 ಅಥವಾ ಇನ್‌ಫ್ಲೂಯೆಂಜಾ ವೈರಸ್ ಭೀತಿ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ‌ ಮಾಡಿದೆ. ಎಚ್‌3ಎನ್2 ವೈರಸ್‌ಗೆ ದೇಶದಲ್ಲಿ ಮೊದಲ ಎರಡು ಸಾವುಗಳು ವರದಿಯಾಗಿವೆ. ಕರ್ನಾಟಕದಲ್ಲಿ ಒಬ್ಬರು ಮತ್ತು ಹರಿಯಾಣದಲ್ಲಿ ಒಬ್ಬರು ವೈರಸ್‌ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.

ದೇಶದಲ್ಲಿ ಸುಮಾರು 90 ಎಚ್‌3ಎನ್‌2 ಪ್ರಕರಣಗಳು ಈವರೆಗೂ ದಾಖಲಾಗಿವೆ. ಇದಲ್ಲದೆ ಎಚ್‌1ಎನ್1 (ಹಂದಿ ಜ್ವರ) ವೈರಸ್‌ನ ಎಂಟು ಪ್ರಕರಣಗಳು ಕೂಡ ವರದಿಯಾಗಿವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಹಾಂಕಾಂಗ್ ಫ್ಲೂ ಎಂದೂ ಕರೆಯಲಾಗುವ ವೈರಸ್‌ಗೆ ರಾಜ್ಯದ ಹಾಸನದಲ್ಲಿ ಒಬ್ಬರು ಬಲಿಯಾಗಿದ್ದಾರೆ. ಮತ್ತೊಂದು ಸಾವು ಹರಿಯಾಣದಲ್ಲಿ ದಾಖಲಾಗಿದೆ.

ಜ್ವರ, ನಿರಂತರ ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಉಬ್ಬಸ ಇದರ ಸಾಮಾನ್ಯ ಲಕ್ಷಣಗಳಿಂದ ಈ ರೋಗ‌ ಬರುತ್ತದೆ. ಇದರ ಜತೆಗೆ ವಾಕರಿಕೆ, ಗಂಟಲು ನೋವು, ಮೈಕೈ ನೋವು ಮತ್ತು ಅತಿಸಾರದ ಸಮಸ್ಯೆಗಳನ್ನೂ ರೋಗಿಗಳು ಅನುಭವಿಸುತ್ತಿದ್ದಾರೆ. ಈ ಲಕ್ಷಣಗಳು ಒಂದು ವಾರದವರೆಗೂ ನಿರಂತರವಾಗಿ ಕಾಡುವ ಅಪಾಯವಿದೆ.

ಈ ವೈರಸ್ ಹೆಚ್ಚು ಅಪಾಯಕಾರಿಯಾಗಿದ್ದು, ಕೆಮ್ಮು, ಸೀನು ಹಾಗೂ ಸೋಂಕಿತ ಜನರೊಂದಿಗಿನ ಸಂಪರ್ಕದಿಂದ ಹರಡುತ್ತದೆ. ಇದರಿಂದ ರಕ್ಷಣೆ ಪಡೆಯಲು ಕೋವಿಡ್ ಮಾದರಿಯ ಕ್ರಮಗಳನ್ನೇ ಅನುಸರಿಸಬೇಕು ಎಂದು ವೈದ್ಯರು ಸಲಹೆ ನೀಡುತ್ತಿದ್ದಾರೆ.

ಜನರು ನಿರಂತರವಾಗಿ ಕೈಗಳನ್ನು ತೊಳೆದುಕೊಳ್ಳುತ್ತಿರಬೇಕು ಮತ್ತು ಮಾಸ್ಕ್‌ ಧರಿಸಬೇಕು. ಸೀನುವಾಗ ಮತ್ತು ಕೆಮ್ಮುವಾಗ ಜನರು ಮುಖ ಹಾಗೂ ಮೂಗನ್ನು ಮುಚ್ಚಿಕೊಳ್ಳಬೇಕು. ಯಥೇಚ್ಛವಾಗಿ ನೀರು ಕುಡಿಯಬೇಕು. ಕಣ್ಣು ಮತ್ತು ಮೂಗನ್ನು ಮುಟ್ಟದಂತೆ ಎಚ್ಚರ ವಹಿಸಬೇಕು. ಜ್ವರ ಹಾಗೂ ದೇಹದ ನೋವಿಗೆ ಪ್ಯಾರಾಸಿಟಮಾಲ್ ತೆಗೆದುಕೊಳ್ಳಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಸಲಹೆ ನೀಡಿದೆ.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

15 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

18 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

19 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

21 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

22 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

1 day ago