H3N2ಗೆ ಕರ್ನಾಟಕದಲ್ಲಿ ಮೊದಲ ಬಲಿ: ಕರ್ನಾಟಕ-ಹರಿಯಾಣದಲ್ಲಿ ತಲಾ 1 ಸಾವು

ದೇಶದಲ್ಲಿ ಕೋವಿಡ್ 19 ಸಾಂಕ್ರಾಮಿಕದ ಬಳಿಕ ಈಗ ಎಚ್‌3ಎನ್‌2 ಅಥವಾ ಇನ್‌ಫ್ಲೂಯೆಂಜಾ ವೈರಸ್ ಭೀತಿ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ‌ ಮಾಡಿದೆ. ಎಚ್‌3ಎನ್2 ವೈರಸ್‌ಗೆ ದೇಶದಲ್ಲಿ ಮೊದಲ ಎರಡು ಸಾವುಗಳು ವರದಿಯಾಗಿವೆ. ಕರ್ನಾಟಕದಲ್ಲಿ ಒಬ್ಬರು ಮತ್ತು ಹರಿಯಾಣದಲ್ಲಿ ಒಬ್ಬರು ವೈರಸ್‌ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.

ದೇಶದಲ್ಲಿ ಸುಮಾರು 90 ಎಚ್‌3ಎನ್‌2 ಪ್ರಕರಣಗಳು ಈವರೆಗೂ ದಾಖಲಾಗಿವೆ. ಇದಲ್ಲದೆ ಎಚ್‌1ಎನ್1 (ಹಂದಿ ಜ್ವರ) ವೈರಸ್‌ನ ಎಂಟು ಪ್ರಕರಣಗಳು ಕೂಡ ವರದಿಯಾಗಿವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಹಾಂಕಾಂಗ್ ಫ್ಲೂ ಎಂದೂ ಕರೆಯಲಾಗುವ ವೈರಸ್‌ಗೆ ರಾಜ್ಯದ ಹಾಸನದಲ್ಲಿ ಒಬ್ಬರು ಬಲಿಯಾಗಿದ್ದಾರೆ. ಮತ್ತೊಂದು ಸಾವು ಹರಿಯಾಣದಲ್ಲಿ ದಾಖಲಾಗಿದೆ.

ಜ್ವರ, ನಿರಂತರ ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಉಬ್ಬಸ ಇದರ ಸಾಮಾನ್ಯ ಲಕ್ಷಣಗಳಿಂದ ಈ ರೋಗ‌ ಬರುತ್ತದೆ. ಇದರ ಜತೆಗೆ ವಾಕರಿಕೆ, ಗಂಟಲು ನೋವು, ಮೈಕೈ ನೋವು ಮತ್ತು ಅತಿಸಾರದ ಸಮಸ್ಯೆಗಳನ್ನೂ ರೋಗಿಗಳು ಅನುಭವಿಸುತ್ತಿದ್ದಾರೆ. ಈ ಲಕ್ಷಣಗಳು ಒಂದು ವಾರದವರೆಗೂ ನಿರಂತರವಾಗಿ ಕಾಡುವ ಅಪಾಯವಿದೆ.

ಈ ವೈರಸ್ ಹೆಚ್ಚು ಅಪಾಯಕಾರಿಯಾಗಿದ್ದು, ಕೆಮ್ಮು, ಸೀನು ಹಾಗೂ ಸೋಂಕಿತ ಜನರೊಂದಿಗಿನ ಸಂಪರ್ಕದಿಂದ ಹರಡುತ್ತದೆ. ಇದರಿಂದ ರಕ್ಷಣೆ ಪಡೆಯಲು ಕೋವಿಡ್ ಮಾದರಿಯ ಕ್ರಮಗಳನ್ನೇ ಅನುಸರಿಸಬೇಕು ಎಂದು ವೈದ್ಯರು ಸಲಹೆ ನೀಡುತ್ತಿದ್ದಾರೆ.

ಜನರು ನಿರಂತರವಾಗಿ ಕೈಗಳನ್ನು ತೊಳೆದುಕೊಳ್ಳುತ್ತಿರಬೇಕು ಮತ್ತು ಮಾಸ್ಕ್‌ ಧರಿಸಬೇಕು. ಸೀನುವಾಗ ಮತ್ತು ಕೆಮ್ಮುವಾಗ ಜನರು ಮುಖ ಹಾಗೂ ಮೂಗನ್ನು ಮುಚ್ಚಿಕೊಳ್ಳಬೇಕು. ಯಥೇಚ್ಛವಾಗಿ ನೀರು ಕುಡಿಯಬೇಕು. ಕಣ್ಣು ಮತ್ತು ಮೂಗನ್ನು ಮುಟ್ಟದಂತೆ ಎಚ್ಚರ ವಹಿಸಬೇಕು. ಜ್ವರ ಹಾಗೂ ದೇಹದ ನೋವಿಗೆ ಪ್ಯಾರಾಸಿಟಮಾಲ್ ತೆಗೆದುಕೊಳ್ಳಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಸಲಹೆ ನೀಡಿದೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

16 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago