Heat Wave(ಬಿಸಿಗಾಳಿ ಆತಂಕ): ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಎ.ಬಿ.ಬಸವರಾಜ್ ಸಲಹೆ

ರಾಜ್ಯದಲ್ಲಿ ಹೆಚ್ಚುತ್ತಿರುವ ತಾಪಮಾನದಲ್ಲಿ ಮುಂಬರುವ ದಿನಗಳಲ್ಲಿ ಬಿಸಿ ಗಾಳಿ (ಹೀಟ್ ವೇವ್) ಬೀಸುವ ಸಾಧ್ಯತೆ ಇರುವ ಕಾರಣ ಮಕ್ಕಳು ಸೇರಿದಂತೆ ಜನ- ಜಾನುವಾರುಗಳು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಸಲಹೆ ನೀಡಿದ್ದಾರೆ.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮುಂಬರುವ ಬೇಸಿಗೆ ಸಮಯದಲ್ಲಿ ಉಂಟಾಗಬಹುದಾದ ಕುಡಿಯುವ ನೀರು, ಮೇವು ಸಮಸ್ಯೆ, ಹಾಗೂ ಬಿಸಿಗಾಳಿಯಿಂದ ಉಂಟಾಗುವ ಪರಿಣಾಮಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿ ಮುಂಬರುವ ದಿನಗಳಲ್ಲಿ ತಾಪಮಾನ ಹೆಚ್ಚಾಗಿ ಬಿಸಿ ಗಾಳಿ ಬೀಸುವ ಸಂಭವವಿದ್ದು ಇದರಿಂದ ಜನ-ಜಾನುವಾರುಗಳಿಗೆ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದರು.

*ಬಿಸಿ ಗಾಳಿಯಿಂದ ರಕ್ಷಣೆ ಪಡೆಯುವ ಕ್ರಮ*

1. ವಿಶೇಷವಾಗಿ ಮಧ್ಯಾಹ್ನ 12.00 ರಿಂದ 3.00 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.
2. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.
3. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು
4. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್ ಗಳನ್ನು ಬಳಸಿ.
5. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.
6. ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ.
7. ದೇಹವನ್ನು ನಿರ್ಜಲೀಕರಣಗೊಳಿಸುವ ಆಲೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಿ.
8. ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ.
9. ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈ ಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.
10. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ.
11. ನಿಮಗೆ ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ.
12. ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ದೇಹವನ್ನು ಮರು-ಜಲೀಕರಣ ಮಾಡಲು ಸಹಾಯ ಮಾಡುತ್ತದೆ.
13. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.
14. ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.
15. ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ.
16. ರೈತರು/ಕೃಷಿ ಕಾರ್ಮಿಕರು ಹೊಲದಲ್ಲಿ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.
17. ಪ್ರಯಾಣಿಕರು ಪ್ರಯಾಣಿಸುವಾಗ, ನಿಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗಿ.
18. ಸಾಧಾರಣ ತಾಪಮಾನ ಮತ್ತು ಶಾಖವು ಸಾಮಾನ್ಯ ಜನರಿಗೆ ಸಹಿಸಿಕೊಳ್ಳಬಲ್ಲದು, ಆದರೆ ದುರ್ಬಲ ಜನರಿಗೆ ಮಧ್ಯಮ ಆರೋಗ್ಯ ಕಾಳಜಿ ಉದಾ: ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವ ಜನರನ್ನು ಶಾಖಕ್ಕೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ.
19. ಹಗುರವಾದ, ತಿಳಿ ಬಣ್ಣದ, ಸಡಿಲವಾದ, ಹತ್ತಿ ಬಟ್ಟೆಗಳನ್ನು ಧರಿಸಿ.
20. ನಿಮ್ಮ ತಲೆಯನ್ನು ಮುಚ್ಚಲು ಬಟ್ಟೆ, ಟೋಪಿ ಅಥವಾ ಛತ್ರಿಯನ್ನು ಬಳಸಿ.

*ಸನ್‌ಸ್ಟ್ರೋಕ್ ನಿಂದ ಪೀಡಿತ ವ್ಯಕ್ತಿಯ ಚಿಕಿತ್ಸೆಗಾಗಿ ಸಲಹೆಗಳು*

1. ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕೆಳಗೆ ಇರಿಸಿ. ಅವರನ್ನು ಒದ್ದೆ ಬಟ್ಟೆಯಿಂದ ಒರೆಸಿ/ಆಗಾಗ ದೇಹವನ್ನು ತೊಳೆಯಿರಿ. ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ. ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು ಮುಖ್ಯ ವಿಷಯವಾಗಿದೆ.
2. ವ್ಯಕ್ತಿಗೆ ORS ಕುಡಿಯಲು ಅಥವಾ ನಿಂಬೆ ಸರಬತ್/ತೋರಣಿ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡಿ.
3. ತಕ್ಷಣ ವ್ಯಕ್ತಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ. ರೋಗಿಗೆ ತಕ್ಷಣದ ಆಸ್ಪತ್ರೆಯ ಅಗತ್ಯವಿರುತ್ತದೆ, ಏಕೆಂದರೆ ಶಾಖದ ಹೊಡೆತಗಳು ಮಾರಣಾಂತಿಕವಾಗಬಹುದು.
4. ಅಪಾಯದಲ್ಲಿರುವ ಜನರು ತಂಪಾದ ವಾತಾವರಣದಿಂದ ಬಿಸಿ ವಾತಾವರಣಕ್ಕೆ ಹೋಗಬೇಕು. ಶಾಖದ ಅಲೆಯ ಸಮಯದಲ್ಲಿ ನಿಮ್ಮ ಕುಟುಂಬಕ್ಕೆ ಅಂತಹ ವ್ಯಕ್ತಿ(ರು) ಭೇಟಿ ನೀಡುತ್ತಿರಬಹುದು. ದೇಹವು ಶಾಖಕ್ಕೆ ಒಗ್ಗಿಕೊಳ್ಳುವವರೆಗೆ ಅವರು ಒಂದು ವಾರದವರೆಗೆ ತೆರೆದ ಮೈದಾನದಲ್ಲಿ ಚಲಿಸಬಾರದು ಮತ್ತು ಸಾಕಷ್ಟು ನೀರು ಕುಡಿಯಬೇಕು. ಶಾಖ ತರಂಗದ ಸಮಯದಲ್ಲಿ ಬಿಸಿ ವಾತಾವರಣಕ್ಕೆ ಕ್ರಮೇಣ ಒಡ್ಡಿಕೊಳ್ಳುವುದರಿಂದ ಒಗ್ಗಿಕೊಳ್ಳುವಿಕೆಯನ್ನು ಸಾಧಿಸಲಾಗುತ್ತದೆ.

*ಅನುಸರಿಸಬೇಕಾದ ಕ್ರಮಗಳು*

1. ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಇರಿ
2. ಬಿಸಿಲಿನ ಅವಧಿಯಲ್ಲಿ ಕೊಡೆಗಳನ್ನು ಬಳಸಿ
3. ಸಾಧ್ಯವಾದಷ್ಟು ಹತ್ತಿಯ ಉಡುವುಗಳನ್ನು ಧರಿಸಿ
4. ಹತ್ತಿಯ ಟೋಪಿಗಳನ್ನು ಬಳಸಿ
5. ಹೆಚ್ಚಿನ ಬಿಸಿಲು ಅವಧಿಯಲ್ಲಿ ವಿಶ್ರಾಂತಿ ಪಡೆಯಿರಿ
6. ನೀರು, ಮಜ್ಜಿಗೆ ಕುಡಿಯಿರಿ
7. ವಾಸವಿರುವ ಕೋಣೆಯನ್ನು ತಂಪಾಗಿರಿಸಿ
8. ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಿ
9. ಬಿಸಿಗಾಳಿ ತುತ್ತಾದ ವ್ಯಕ್ತಿಗೆ ಕೂಡಲೇ ಚಿಕಿತ್ಸೆ ನೀಡಿ
10. ಬಿಸಿಗಾಳಿ ತುತ್ತಾದವರಿಗೆ ಸಾಕಷ್ಟು ಕುಡಿಯುವ ನೀರು, ಮಜ್ಜಿಗೆ, ದ್ರವಹಾರ ನೀಡಿ

*ಅನುಸರಿಸಬಾರದ ಕ್ರಮಗಳು*

1. ನೇರ ಬಿಸಿಲು/ಬಿಸಿಗಾಳಿಗೆ ಒಡ್ಡಿಕೊಳ್ಳಬೇಡಿ
2. ಬಿಸಿಲಿನ ಅವಧಿಯಲ್ಲಿ ಕೊಡೆ ಇಲ್ಲದೆ ಹೊರಗೆ ಹೋಗಬೇಡಿ
3. ಕಪ್ಪು /ಘಾಡ ಬಣ್ಣದ, ತೆಳುವಾದ ಹಾಗೂ ಸಿಂಥಟಿಕ್ ಉಡುಪುಗಳನ್ನು ಧರಿಸಬೇಡಿ
4. ನೇರವಾಗಿ ಬಿಸಿಲಿನ ಝಳಕ್ಕೆ ತಲೆ ಒಡ್ಡಬೇಡಿ
5. ಹೆಚ್ಚಿನ ಬಿಸಿಲು ಇರುವ ಅವಧಿಯಲ್ಲಿ ಶ್ರಮದಾಯಕ ದೈಹಿಕ ಕೆಲಸಗಳನ್ನು ಮಾಡಬೇಡಿ
6. ಬಿಸಿ ಚಹ, ಮದ್ಯ ಸೇವಿಸಬೇಡಿ
7. ವಾಸವಿರುವ ಕೋಣೆಯಲ್ಲಿ ನೇರವಾಗಿ ಬಿಸಿಲು ಬೀಳುವುದನ್ನು ತಪ್ಪಿಸಿ
8. ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಲು ತಡಮಾಡಬೇಡಿ
9. ಬಿಸಿಗಾಳಿ ತುತ್ತಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡುವುದನ್ನು ತಡಮಾಡಬೇಡಿ
10. ಬಿಸಿಗಾಳಿ ಸಂದರ್ಭಗಳಲ್ಲಿ ಚಹಾ, ಕಾಫಿ ಮತ್ತು ಜೇನು ಸೇವಿಸಬೇಡಿ.

*ಜನ-ಜಾನುವಾರುಗಳಿಗೆ ಕುಡಿಯುವ ನೀರು, ಮೇವಿಗಿ ಸಮಸ್ಯೆ ಆಗದಂತೆ ಎಚ್ಚರ ವಹಿಸಿ*

ಜಿಲ್ಲೆಯ ಗ್ರಾಮೀಣ, ನಗರದ ಯಾವುದೇ ಪ್ರದೇಶದಲ್ಲಿ ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ಅಧಿಕಾರಿಗಳು ತ್ವರಿತ ಪರಿಹಾರ ಕಂಡುಕೊಳ್ಳಬೇಕು. ಈಗಾಗಲೇ ಗ್ರಾಮೀಣ ಭಾಗದ 54 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 98 ಗ್ರಾಮಗಳನ್ನು ಕುಡಿಯುವ ನೀರು ಸಮಸ್ಯೆ ಉದ್ಭವಿಸಬಹುದಾದ ಹಳ್ಳಿಗಳೆಂದು ಗುರ್ತಿಸಲಾಗಿದೆ. ಅವಶ್ಯಕತೆ ಇದ್ದಲ್ಲಿ ಖಾಸಗಿ ಬೋರ್ ವೆಲ್ ಗಳು ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು.

ಜಾನುವಾರುಗಳಿಗೆ ಮೇವಿನ ಸಮಸ್ಯೆ ಆಗದಂತೆ ಈಗಾಗಲೇ ಗೋಶಾಲೆಗಳಲ್ಲಿ ಅಂದಾಜು 3 ಲಕ್ಷ ಟನ್ ರಷ್ಟು ಮೇವು ಮೇವು ಸಂಗ್ರಹಿಸಿಡಲಾಗಿದೆ ಎಂದರು.

ಹಕ್ಕಿ ಜ್ವರ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೋಳಿಗಳು ಅಥವಾ ಇನ್ನಿತರ ಪ್ರಾಣಿ ಪಕ್ಷಿಗಳ ಅನುಮಾನಾಸ್ಪದವಾಗಿ ಅಸಹಜವಾಗಿ ಇಲ್ಲವೇ ಇದ್ದಕ್ಕಿದ್ದಂತೆ ಸಾವುಗಳು ಕಂಡುಬಂದಲ್ಲಿ ಹತ್ತಿರದ ಪಶು ಇಲಾಖೆಗೆ ಮಾಹಿತಿ ನೀಡಬೇಕು. ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿ ಸೇವಿಸುವುದರಿಂದ ಹಕ್ಕಿ ಜ್ವರ ಬರುವುದಿಲ್ಲ.

ಬೇಸಿಗೆ ಸಮಯದಲ್ಲಿ ಕಾಲರಾ ರೋಗ ಉಲ್ಬಣವಾಗುವ ಸಾಧ್ಯತೆ ದಟ್ಟವಾಗಿದ್ದು, ಸಾರ್ವಜನಿಕರು ನೀರನ್ನು ಕಾಯಿಸಿ ಆರಿಸಿ ಕುಡಿಯಬೇಕು. ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಹಣ್ಣು ಹಾಗೂ ಹಸಿ ತರಕಾರಿಯನ್ನು ತೊಳೆದು ಸೇವಿಸಬೇಕು. ವಾಂತಿ ಅಥವಾ ಬೇಧಿ ಕಾಣಿಸಿಕೊಂಡ ಕೂಡಲೇ ವೈದ್ಯರನ್ನು ಸಂಪರ್ಕಿಸಿ, ಆರೋಗ್ಯ ಸಲಹೆ ಪಡೆದುಕೊಳ್ಳುಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

10 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

22 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

22 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

1 day ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

1 day ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago