HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಸೆಪ್ಟೆಂಬರ್ 15ರವರೆಗೆ ಸಮಯಾವಕಾಶ

ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (HSRP) ಅಳವಡಿಕೆಗೆ ಈಗಾಗಲೇ ಎರಡ್ಮೂರು ಬಾರಿ ಅವಧಿ ವಿಸ್ತರಣೆ ಮಾಡಿದ್ದು, ಜೂನ್ 12ಕ್ಕೆ ಡೆಡ್​ಲೈನ್ ಕೊನೆಗೊಂಡಿದೆ. ಆದರೆ, ಕರ್ನಾಟಕ ಹೈಕೋರ್ಟ್​ ಹೆಚ್ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಜುಲೈ 4ರ ವರೆಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅಲ್ಲದೆ, ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ವಿಸ್ತರಿಸಲು ಒಪ್ಪಿಗೆ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಕಾಲಾವಕಾಶ ನೀಡಿದೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸೆಪ್ಟೆಂಬರ್15 ವರಿಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್​ಲೈನ್ ನೀಡಲಾಗಿದೆ. ಸೆಪ್ಟೆಂಬರ್ 15 ಬಳಿಕ ಅವಧಿ ವಿಸ್ತರಣೆ ಇಲ್ಲ. ಈಗಾಗಲೇ ಹಲವು ಬಾರಿ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಶೀಘ್ರದಲ್ಲೇ ಹೆಚ್ಎಸ್ಆರ್​ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ. ಮತ್ತೆ ಗಡುವು ವಿಸ್ತರಣೆ ಮಾಡಲ್ಲ. ಸೆಪ್ಟೆಂಬರ್ 15ರೊಳಗೆ ವಾಹನಗಳಿಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಆಳವಡಿಸಿಕೊಳ್ಳಿ ಎಂದು ವಾಹನ ಸವಾರರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮನವಿ ಮಾಡಿದರು.

2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಸಲು ಜೂನ್ 12 ಕೊನೆ ದಿನವಾಗಿತ್ತು. ಆದ್ರೆ, ಹೆಚ್‌ಎಸ್‌ಆರ್‌ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4ರ ತನಕ ವಿಸ್ತರಣೆ ಮಾಡಿದೆ. ಇದೀಗ ಖುದ್ದು ರಾಜ್ಯ ಸರ್ಕಾರ, ಸೆಪ್ಟೆಂಬರ್ 15ರ ವರೆಗೆ ವಿಸ್ತರಣೆ ಮಾಡಲು ಮುಂದಾಗಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದು, ಶೀಘ್ರದಲ್ಲೇ ಸರ್ಕಾರಿಂದ ಅಧಿಕೃತ ಸುತ್ತೋಲೆ ಹೊರಬೀಳಲಿದೆ.

Ramesh Babu

Journalist

Recent Posts

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

1 hour ago

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

6 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

8 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

19 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

20 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

22 hours ago