ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (HSRP) ಅಳವಡಿಕೆಗೆ ಈಗಾಗಲೇ ಎರಡ್ಮೂರು ಬಾರಿ ಅವಧಿ ವಿಸ್ತರಣೆ ಮಾಡಿದ್ದು, ಜೂನ್ 12ಕ್ಕೆ ಡೆಡ್ಲೈನ್ ಕೊನೆಗೊಂಡಿದೆ. ಆದರೆ, ಕರ್ನಾಟಕ ಹೈಕೋರ್ಟ್ ಹೆಚ್ಎಸ್ಆರ್ಪಿ ಅಳವಡಿಸದವರ ವಿರುದ್ಧ ಜುಲೈ 4ರ ವರೆಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅಲ್ಲದೆ, ಹೆಚ್ಎಸ್ಆರ್ಪಿ ಅಳವಡಿಕೆಯ ಗಡುವನ್ನು ವಿಸ್ತರಿಸಲು ಒಪ್ಪಿಗೆ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಕಾಲಾವಕಾಶ ನೀಡಿದೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸೆಪ್ಟೆಂಬರ್15 ವರಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್ಲೈನ್ ನೀಡಲಾಗಿದೆ. ಸೆಪ್ಟೆಂಬರ್ 15 ಬಳಿಕ ಅವಧಿ ವಿಸ್ತರಣೆ ಇಲ್ಲ. ಈಗಾಗಲೇ ಹಲವು ಬಾರಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಶೀಘ್ರದಲ್ಲೇ ಹೆಚ್ಎಸ್ಆರ್ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ. ಮತ್ತೆ ಗಡುವು ವಿಸ್ತರಣೆ ಮಾಡಲ್ಲ. ಸೆಪ್ಟೆಂಬರ್ 15ರೊಳಗೆ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಸಿಕೊಳ್ಳಿ ಎಂದು ವಾಹನ ಸವಾರರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮನವಿ ಮಾಡಿದರು.
2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳ(ಎಚ್ಎಸ್ಆರ್ಪಿ) ಅಳವಡಿಸಲು ಜೂನ್ 12 ಕೊನೆ ದಿನವಾಗಿತ್ತು. ಆದ್ರೆ, ಹೆಚ್ಎಸ್ಆರ್ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4ರ ತನಕ ವಿಸ್ತರಣೆ ಮಾಡಿದೆ. ಇದೀಗ ಖುದ್ದು ರಾಜ್ಯ ಸರ್ಕಾರ, ಸೆಪ್ಟೆಂಬರ್ 15ರ ವರೆಗೆ ವಿಸ್ತರಣೆ ಮಾಡಲು ಮುಂದಾಗಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದು, ಶೀಘ್ರದಲ್ಲೇ ಸರ್ಕಾರಿಂದ ಅಧಿಕೃತ ಸುತ್ತೋಲೆ ಹೊರಬೀಳಲಿದೆ.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…