HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಸೆಪ್ಟೆಂಬರ್ 15ರವರೆಗೆ ಸಮಯಾವಕಾಶ

ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (HSRP) ಅಳವಡಿಕೆಗೆ ಈಗಾಗಲೇ ಎರಡ್ಮೂರು ಬಾರಿ ಅವಧಿ ವಿಸ್ತರಣೆ ಮಾಡಿದ್ದು, ಜೂನ್ 12ಕ್ಕೆ ಡೆಡ್​ಲೈನ್ ಕೊನೆಗೊಂಡಿದೆ. ಆದರೆ, ಕರ್ನಾಟಕ ಹೈಕೋರ್ಟ್​ ಹೆಚ್ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಜುಲೈ 4ರ ವರೆಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅಲ್ಲದೆ, ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ವಿಸ್ತರಿಸಲು ಒಪ್ಪಿಗೆ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಕಾಲಾವಕಾಶ ನೀಡಿದೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸೆಪ್ಟೆಂಬರ್15 ವರಿಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್​ಲೈನ್ ನೀಡಲಾಗಿದೆ. ಸೆಪ್ಟೆಂಬರ್ 15 ಬಳಿಕ ಅವಧಿ ವಿಸ್ತರಣೆ ಇಲ್ಲ. ಈಗಾಗಲೇ ಹಲವು ಬಾರಿ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಶೀಘ್ರದಲ್ಲೇ ಹೆಚ್ಎಸ್ಆರ್​ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ. ಮತ್ತೆ ಗಡುವು ವಿಸ್ತರಣೆ ಮಾಡಲ್ಲ. ಸೆಪ್ಟೆಂಬರ್ 15ರೊಳಗೆ ವಾಹನಗಳಿಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಆಳವಡಿಸಿಕೊಳ್ಳಿ ಎಂದು ವಾಹನ ಸವಾರರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮನವಿ ಮಾಡಿದರು.

2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಸಲು ಜೂನ್ 12 ಕೊನೆ ದಿನವಾಗಿತ್ತು. ಆದ್ರೆ, ಹೆಚ್‌ಎಸ್‌ಆರ್‌ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4ರ ತನಕ ವಿಸ್ತರಣೆ ಮಾಡಿದೆ. ಇದೀಗ ಖುದ್ದು ರಾಜ್ಯ ಸರ್ಕಾರ, ಸೆಪ್ಟೆಂಬರ್ 15ರ ವರೆಗೆ ವಿಸ್ತರಣೆ ಮಾಡಲು ಮುಂದಾಗಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದು, ಶೀಘ್ರದಲ್ಲೇ ಸರ್ಕಾರಿಂದ ಅಧಿಕೃತ ಸುತ್ತೋಲೆ ಹೊರಬೀಳಲಿದೆ.

Ramesh Babu

Journalist

Recent Posts

ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಎಂಎಲ್‌ಸಿ ಟಿ.ಎ. ಶರವಣ, ಅವಧೂತ ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್‌ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ…

2 hours ago

‘ಡೇ ಕೇರ್’ ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ……?

ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…

5 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

18 hours ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

18 hours ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

18 hours ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

23 hours ago