#ICCChampionsTrophy: ಪಾಕಿಸ್ತಾನ ವಿರುದ್ಧ ವಿಜಯ ಕೇಕೆ ಹಾಕಿದ ಟೀಂ ಇಂಡಿಯಾ: ಸೆಂಚುರಿ ಬಾರಿಸಿದ  ವಿರಾಟ್ ಕೊಹ್ಲಿ

ಆಕರ್ಷಕ ಕವರ್ ಡ್ರೈವ್ ಮೂಲಕ ಬೊಂಬಾಟ್ ಶತಕ ಸಿಡಿಸುವ ಮೂಲಕ ಕೋಹ್ಲಿ ಪಾಕಿಸ್ತಾನಕ್ಕೆ ವಿರಾಟ್ ರೂಪದ ದರ್ಶನ ಮಾಡಿಸುವ ಮೂಲಕ ಗೆದ್ದು 2017 ರ ಚಾಂಪಿಯನ್ಸ್ ಟ್ರೋಫಿ ಫೈನಲ್ಸ್ ಪಂದ್ಯದ ಸೋಲಿನ ಮುಯ್ಯಿ ತೀರಿಸಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮಹಮದ್ ರಿಜ್ವಾನ್ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಆರಂಭ ಉತ್ತಮವಾಗಿರಲಿಲ್ಲ ಅಕ್ಷರ್ ಪಟೇಲ್ ಹೊಡೆದ ರನೌಟ್ ಗೆ ಆರಂಭಿಕ ಆಟಗಾರ ಇಮಾಮ್ ಉಲ್ ಹಕ್ ಪೆವಿಲಿಯನ್ ಸೇರಿದರು.

ನಂತರ ಬಂದ ಆಟಗಾರರನ್ನು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಇನ್ನಿಲ್ಲದಂತೆ ಕಾಡಿ ಬಾಬರ್ ಅಜಾಮ್ (23) ಹಾಗೂ ಶಕೀಲ್(62) ಅವರ ಜೊತೆಯಾಟ ಮುರಿಯುವಲ್ಲಿ ಸಫಲರಾದರು.

ವಿಕೆಟ್ ಪತನವಾದರೂ ನಾಯಕ ರಿಜ್ವಾನ್ (46) ಹಾಗೂ ಕುಶ್ದಿಲ್ (38)ರನ್ ಗಳಿಸಿದರೂ ಉತ್ತಮ ಮೊತ್ತ ಕಲೆಹಾಕುವಲ್ಲಿ ವಿಫಲರಾದರು, ಭಾರತದ ಪರವಾಗಿ ಕುಲದೀಪ್ ಯಾದವ್ ಮೂರು ವಿಕೆಟ್, ಹಾರ್ದಿಕ್ ಪಾಂಡ್ಯ ಎರಡು ವಿಕೆಟ್ ಪಡೆದರು.

ಸಾಧಾರಣ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (20) ಹಾಗೂ ಶುಭಮನ್ ಗಿಲ್ (46) ವೇಗವಾಗಿ ರನ್ ಪೇರಿಸಿ ಅಡಿಪಾಯ ಹಾಕಿದರು.

ಚೇಸಿಂಗ್ ಕಿಂಗ್ ಎಂದೇ ಹೆಸರಾದ ವಿರಾಟ್ ಕೊಹ್ಲಿ ಏಳು ಬೌಂಡರಿ ನೆರವಿನಿಂದ (100) ರನ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (56)ಅವರ ಆಕಶ೯ಕ ಅಧ೯ ಶತಕದ ನೆರವಿನಿಂದ ಟೀಂ ಇಂಡಿಯಾ ಗೆದ್ದು ಬೀಗಿತು.

ಹಾಲಿ ಚಾಂಪಿಯನ್ ಪಾಕಿಸ್ತಾನ ಟೂರ್ನಿಯಿಂದ ಹೊರಗೆ ಹೋಗುವ ಸಾಧ್ಯತೆಯೇ ಹೆಚ್ಚಿದ್ದು ಮುಂದಿನ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಗೆದ್ದು ಮಾನ ಉಳಿಸಿಕೊಳ್ಳ ಬೇಕಿದೆ, ಟೂರ್ನಿಯಲ್ಲಿ ಆಕಶ೯ಕ ಶತಕ ದಾಖಲಿಸಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

3 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

3 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

4 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

6 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

14 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

14 hours ago