#ICCChampionsTrophy: ಪಾಕಿಸ್ತಾನ ವಿರುದ್ಧ ವಿಜಯ ಕೇಕೆ ಹಾಕಿದ ಟೀಂ ಇಂಡಿಯಾ: ಸೆಂಚುರಿ ಬಾರಿಸಿದ  ವಿರಾಟ್ ಕೊಹ್ಲಿ

ಆಕರ್ಷಕ ಕವರ್ ಡ್ರೈವ್ ಮೂಲಕ ಬೊಂಬಾಟ್ ಶತಕ ಸಿಡಿಸುವ ಮೂಲಕ ಕೋಹ್ಲಿ ಪಾಕಿಸ್ತಾನಕ್ಕೆ ವಿರಾಟ್ ರೂಪದ ದರ್ಶನ ಮಾಡಿಸುವ ಮೂಲಕ ಗೆದ್ದು 2017 ರ ಚಾಂಪಿಯನ್ಸ್ ಟ್ರೋಫಿ ಫೈನಲ್ಸ್ ಪಂದ್ಯದ ಸೋಲಿನ ಮುಯ್ಯಿ ತೀರಿಸಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮಹಮದ್ ರಿಜ್ವಾನ್ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಆರಂಭ ಉತ್ತಮವಾಗಿರಲಿಲ್ಲ ಅಕ್ಷರ್ ಪಟೇಲ್ ಹೊಡೆದ ರನೌಟ್ ಗೆ ಆರಂಭಿಕ ಆಟಗಾರ ಇಮಾಮ್ ಉಲ್ ಹಕ್ ಪೆವಿಲಿಯನ್ ಸೇರಿದರು.

ನಂತರ ಬಂದ ಆಟಗಾರರನ್ನು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಇನ್ನಿಲ್ಲದಂತೆ ಕಾಡಿ ಬಾಬರ್ ಅಜಾಮ್ (23) ಹಾಗೂ ಶಕೀಲ್(62) ಅವರ ಜೊತೆಯಾಟ ಮುರಿಯುವಲ್ಲಿ ಸಫಲರಾದರು.

ವಿಕೆಟ್ ಪತನವಾದರೂ ನಾಯಕ ರಿಜ್ವಾನ್ (46) ಹಾಗೂ ಕುಶ್ದಿಲ್ (38)ರನ್ ಗಳಿಸಿದರೂ ಉತ್ತಮ ಮೊತ್ತ ಕಲೆಹಾಕುವಲ್ಲಿ ವಿಫಲರಾದರು, ಭಾರತದ ಪರವಾಗಿ ಕುಲದೀಪ್ ಯಾದವ್ ಮೂರು ವಿಕೆಟ್, ಹಾರ್ದಿಕ್ ಪಾಂಡ್ಯ ಎರಡು ವಿಕೆಟ್ ಪಡೆದರು.

ಸಾಧಾರಣ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (20) ಹಾಗೂ ಶುಭಮನ್ ಗಿಲ್ (46) ವೇಗವಾಗಿ ರನ್ ಪೇರಿಸಿ ಅಡಿಪಾಯ ಹಾಕಿದರು.

ಚೇಸಿಂಗ್ ಕಿಂಗ್ ಎಂದೇ ಹೆಸರಾದ ವಿರಾಟ್ ಕೊಹ್ಲಿ ಏಳು ಬೌಂಡರಿ ನೆರವಿನಿಂದ (100) ರನ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (56)ಅವರ ಆಕಶ೯ಕ ಅಧ೯ ಶತಕದ ನೆರವಿನಿಂದ ಟೀಂ ಇಂಡಿಯಾ ಗೆದ್ದು ಬೀಗಿತು.

ಹಾಲಿ ಚಾಂಪಿಯನ್ ಪಾಕಿಸ್ತಾನ ಟೂರ್ನಿಯಿಂದ ಹೊರಗೆ ಹೋಗುವ ಸಾಧ್ಯತೆಯೇ ಹೆಚ್ಚಿದ್ದು ಮುಂದಿನ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಗೆದ್ದು ಮಾನ ಉಳಿಸಿಕೊಳ್ಳ ಬೇಕಿದೆ, ಟೂರ್ನಿಯಲ್ಲಿ ಆಕಶ೯ಕ ಶತಕ ದಾಖಲಿಸಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

50 minutes ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

2 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

6 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

8 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

11 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

12 hours ago