#ICCChampionsTrophy: ಪಾಕಿಸ್ತಾನ ವಿರುದ್ಧ ವಿಜಯ ಕೇಕೆ ಹಾಕಿದ ಟೀಂ ಇಂಡಿಯಾ: ಸೆಂಚುರಿ ಬಾರಿಸಿದ  ವಿರಾಟ್ ಕೊಹ್ಲಿ

ಆಕರ್ಷಕ ಕವರ್ ಡ್ರೈವ್ ಮೂಲಕ ಬೊಂಬಾಟ್ ಶತಕ ಸಿಡಿಸುವ ಮೂಲಕ ಕೋಹ್ಲಿ ಪಾಕಿಸ್ತಾನಕ್ಕೆ ವಿರಾಟ್ ರೂಪದ ದರ್ಶನ ಮಾಡಿಸುವ ಮೂಲಕ ಗೆದ್ದು 2017 ರ ಚಾಂಪಿಯನ್ಸ್ ಟ್ರೋಫಿ ಫೈನಲ್ಸ್ ಪಂದ್ಯದ ಸೋಲಿನ ಮುಯ್ಯಿ ತೀರಿಸಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮಹಮದ್ ರಿಜ್ವಾನ್ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಆರಂಭ ಉತ್ತಮವಾಗಿರಲಿಲ್ಲ ಅಕ್ಷರ್ ಪಟೇಲ್ ಹೊಡೆದ ರನೌಟ್ ಗೆ ಆರಂಭಿಕ ಆಟಗಾರ ಇಮಾಮ್ ಉಲ್ ಹಕ್ ಪೆವಿಲಿಯನ್ ಸೇರಿದರು.

ನಂತರ ಬಂದ ಆಟಗಾರರನ್ನು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಇನ್ನಿಲ್ಲದಂತೆ ಕಾಡಿ ಬಾಬರ್ ಅಜಾಮ್ (23) ಹಾಗೂ ಶಕೀಲ್(62) ಅವರ ಜೊತೆಯಾಟ ಮುರಿಯುವಲ್ಲಿ ಸಫಲರಾದರು.

ವಿಕೆಟ್ ಪತನವಾದರೂ ನಾಯಕ ರಿಜ್ವಾನ್ (46) ಹಾಗೂ ಕುಶ್ದಿಲ್ (38)ರನ್ ಗಳಿಸಿದರೂ ಉತ್ತಮ ಮೊತ್ತ ಕಲೆಹಾಕುವಲ್ಲಿ ವಿಫಲರಾದರು, ಭಾರತದ ಪರವಾಗಿ ಕುಲದೀಪ್ ಯಾದವ್ ಮೂರು ವಿಕೆಟ್, ಹಾರ್ದಿಕ್ ಪಾಂಡ್ಯ ಎರಡು ವಿಕೆಟ್ ಪಡೆದರು.

ಸಾಧಾರಣ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (20) ಹಾಗೂ ಶುಭಮನ್ ಗಿಲ್ (46) ವೇಗವಾಗಿ ರನ್ ಪೇರಿಸಿ ಅಡಿಪಾಯ ಹಾಕಿದರು.

ಚೇಸಿಂಗ್ ಕಿಂಗ್ ಎಂದೇ ಹೆಸರಾದ ವಿರಾಟ್ ಕೊಹ್ಲಿ ಏಳು ಬೌಂಡರಿ ನೆರವಿನಿಂದ (100) ರನ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (56)ಅವರ ಆಕಶ೯ಕ ಅಧ೯ ಶತಕದ ನೆರವಿನಿಂದ ಟೀಂ ಇಂಡಿಯಾ ಗೆದ್ದು ಬೀಗಿತು.

ಹಾಲಿ ಚಾಂಪಿಯನ್ ಪಾಕಿಸ್ತಾನ ಟೂರ್ನಿಯಿಂದ ಹೊರಗೆ ಹೋಗುವ ಸಾಧ್ಯತೆಯೇ ಹೆಚ್ಚಿದ್ದು ಮುಂದಿನ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಗೆದ್ದು ಮಾನ ಉಳಿಸಿಕೊಳ್ಳ ಬೇಕಿದೆ, ಟೂರ್ನಿಯಲ್ಲಿ ಆಕಶ೯ಕ ಶತಕ ದಾಖಲಿಸಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಹಿಟ್ & ರನ್: ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು: ಸಿಮೆಂಟ್ ಬಲ್ಕರ್ ಪರಾರಿ

ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…

3 hours ago

“ಕುವೆಂಪು”….. ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ……

ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…

9 hours ago

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

1 day ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

2 days ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

2 days ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

2 days ago