ಆಕರ್ಷಕ ಕವರ್ ಡ್ರೈವ್ ಮೂಲಕ ಬೊಂಬಾಟ್ ಶತಕ ಸಿಡಿಸುವ ಮೂಲಕ ಕೋಹ್ಲಿ ಪಾಕಿಸ್ತಾನಕ್ಕೆ ವಿರಾಟ್ ರೂಪದ ದರ್ಶನ ಮಾಡಿಸುವ ಮೂಲಕ ಗೆದ್ದು 2017 ರ ಚಾಂಪಿಯನ್ಸ್ ಟ್ರೋಫಿ ಫೈನಲ್ಸ್ ಪಂದ್ಯದ ಸೋಲಿನ ಮುಯ್ಯಿ ತೀರಿಸಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.
ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮಹಮದ್ ರಿಜ್ವಾನ್ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಆರಂಭ ಉತ್ತಮವಾಗಿರಲಿಲ್ಲ ಅಕ್ಷರ್ ಪಟೇಲ್ ಹೊಡೆದ ರನೌಟ್ ಗೆ ಆರಂಭಿಕ ಆಟಗಾರ ಇಮಾಮ್ ಉಲ್ ಹಕ್ ಪೆವಿಲಿಯನ್ ಸೇರಿದರು.
ವಿಕೆಟ್ ಪತನವಾದರೂ ನಾಯಕ ರಿಜ್ವಾನ್ (46) ಹಾಗೂ ಕುಶ್ದಿಲ್ (38)ರನ್ ಗಳಿಸಿದರೂ ಉತ್ತಮ ಮೊತ್ತ ಕಲೆಹಾಕುವಲ್ಲಿ ವಿಫಲರಾದರು, ಭಾರತದ ಪರವಾಗಿ ಕುಲದೀಪ್ ಯಾದವ್ ಮೂರು ವಿಕೆಟ್, ಹಾರ್ದಿಕ್ ಪಾಂಡ್ಯ ಎರಡು ವಿಕೆಟ್ ಪಡೆದರು.
ಚೇಸಿಂಗ್ ಕಿಂಗ್ ಎಂದೇ ಹೆಸರಾದ ವಿರಾಟ್ ಕೊಹ್ಲಿ ಏಳು ಬೌಂಡರಿ ನೆರವಿನಿಂದ (100) ರನ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (56)ಅವರ ಆಕಶ೯ಕ ಅಧ೯ ಶತಕದ ನೆರವಿನಿಂದ ಟೀಂ ಇಂಡಿಯಾ ಗೆದ್ದು ಬೀಗಿತು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…