ಆಕರ್ಷಕ ಕವರ್ ಡ್ರೈವ್ ಮೂಲಕ ಬೊಂಬಾಟ್ ಶತಕ ಸಿಡಿಸುವ ಮೂಲಕ ಕೋಹ್ಲಿ ಪಾಕಿಸ್ತಾನಕ್ಕೆ ವಿರಾಟ್ ರೂಪದ ದರ್ಶನ ಮಾಡಿಸುವ ಮೂಲಕ ಗೆದ್ದು 2017 ರ ಚಾಂಪಿಯನ್ಸ್ ಟ್ರೋಫಿ ಫೈನಲ್ಸ್ ಪಂದ್ಯದ ಸೋಲಿನ ಮುಯ್ಯಿ ತೀರಿಸಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.
ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮಹಮದ್ ರಿಜ್ವಾನ್ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಆರಂಭ ಉತ್ತಮವಾಗಿರಲಿಲ್ಲ ಅಕ್ಷರ್ ಪಟೇಲ್ ಹೊಡೆದ ರನೌಟ್ ಗೆ ಆರಂಭಿಕ ಆಟಗಾರ ಇಮಾಮ್ ಉಲ್ ಹಕ್ ಪೆವಿಲಿಯನ್ ಸೇರಿದರು.
ವಿಕೆಟ್ ಪತನವಾದರೂ ನಾಯಕ ರಿಜ್ವಾನ್ (46) ಹಾಗೂ ಕುಶ್ದಿಲ್ (38)ರನ್ ಗಳಿಸಿದರೂ ಉತ್ತಮ ಮೊತ್ತ ಕಲೆಹಾಕುವಲ್ಲಿ ವಿಫಲರಾದರು, ಭಾರತದ ಪರವಾಗಿ ಕುಲದೀಪ್ ಯಾದವ್ ಮೂರು ವಿಕೆಟ್, ಹಾರ್ದಿಕ್ ಪಾಂಡ್ಯ ಎರಡು ವಿಕೆಟ್ ಪಡೆದರು.
ಚೇಸಿಂಗ್ ಕಿಂಗ್ ಎಂದೇ ಹೆಸರಾದ ವಿರಾಟ್ ಕೊಹ್ಲಿ ಏಳು ಬೌಂಡರಿ ನೆರವಿನಿಂದ (100) ರನ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (56)ಅವರ ಆಕಶ೯ಕ ಅಧ೯ ಶತಕದ ನೆರವಿನಿಂದ ಟೀಂ ಇಂಡಿಯಾ ಗೆದ್ದು ಬೀಗಿತು.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…