ಆಕರ್ಷಕ ಕವರ್ ಡ್ರೈವ್ ಮೂಲಕ ಬೊಂಬಾಟ್ ಶತಕ ಸಿಡಿಸುವ ಮೂಲಕ ಕೋಹ್ಲಿ ಪಾಕಿಸ್ತಾನಕ್ಕೆ ವಿರಾಟ್ ರೂಪದ ದರ್ಶನ ಮಾಡಿಸುವ ಮೂಲಕ ಗೆದ್ದು 2017 ರ ಚಾಂಪಿಯನ್ಸ್ ಟ್ರೋಫಿ ಫೈನಲ್ಸ್ ಪಂದ್ಯದ ಸೋಲಿನ ಮುಯ್ಯಿ ತೀರಿಸಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.
ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮಹಮದ್ ರಿಜ್ವಾನ್ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಆರಂಭ ಉತ್ತಮವಾಗಿರಲಿಲ್ಲ ಅಕ್ಷರ್ ಪಟೇಲ್ ಹೊಡೆದ ರನೌಟ್ ಗೆ ಆರಂಭಿಕ ಆಟಗಾರ ಇಮಾಮ್ ಉಲ್ ಹಕ್ ಪೆವಿಲಿಯನ್ ಸೇರಿದರು.
ವಿಕೆಟ್ ಪತನವಾದರೂ ನಾಯಕ ರಿಜ್ವಾನ್ (46) ಹಾಗೂ ಕುಶ್ದಿಲ್ (38)ರನ್ ಗಳಿಸಿದರೂ ಉತ್ತಮ ಮೊತ್ತ ಕಲೆಹಾಕುವಲ್ಲಿ ವಿಫಲರಾದರು, ಭಾರತದ ಪರವಾಗಿ ಕುಲದೀಪ್ ಯಾದವ್ ಮೂರು ವಿಕೆಟ್, ಹಾರ್ದಿಕ್ ಪಾಂಡ್ಯ ಎರಡು ವಿಕೆಟ್ ಪಡೆದರು.
ಚೇಸಿಂಗ್ ಕಿಂಗ್ ಎಂದೇ ಹೆಸರಾದ ವಿರಾಟ್ ಕೊಹ್ಲಿ ಏಳು ಬೌಂಡರಿ ನೆರವಿನಿಂದ (100) ರನ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (56)ಅವರ ಆಕಶ೯ಕ ಅಧ೯ ಶತಕದ ನೆರವಿನಿಂದ ಟೀಂ ಇಂಡಿಯಾ ಗೆದ್ದು ಬೀಗಿತು.
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…