ಐನೂರು ಮುಖಬೆಲೆಯ 51,95,900 ರೂ. ಭಾರತೀಯ ಕರೆನ್ಸಿ ಹಾಗೂ 50,79,967 ರೂ. ಮೌಲ್ಯದ 824.67 ಗ್ರಾಂ. ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಇಬ್ಬರು ಪ್ರಯಾಣಿಕರು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಫೆ.29ರ ರಾತ್ರಿ ಹಾಗೂ ಮಾ.1ರ ಮುಂಜಾನೆಯಲ್ಲಿ ಇಬ್ಬರು ಪ್ರಯಾಣಿಕರನ್ನ ತಪಾಸಣೆ ನಡೆಸಿದಾಗ ಹಣ ಮತ್ತು ಚಿನ್ನ ಕಳ್ಳಸಾಗಾಣಿಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಒಡಿ-242 ವಿಮಾನದ ಮೂಲಕ ಕೌಲಾಲಂಪುರ್ಗೆ INR 500 ಮುಖಬೆಲೆಯ ರೂ.51,95,500 ಮೊತ್ತದ ಭಾರತೀಯ ಕರೆನ್ಸಿಯನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಭಾರತೀಯ ನಾಗರಿಕರೊಬ್ಬರು ಪ್ರಯಾಣಿಕರ ಚೆಕ್ ಇನ್ ಬ್ಯಾಗೇಜ್ನಲ್ಲಿ ಹಣವನ್ನ ಮರೆಮಾಚಿದ್ದರು. ತಪಾಸಣೆ ನಡೆಸಿ ಅದನ್ನ ಕೂಡಲೇ ವಶಪಡಿಸಿಕೊಳ್ಳಲಾಗಿದೆ.
ಮತ್ತೊಂದು ಘಟನೆಯಲ್ಲಿ, ಇಂಡಿಗೋ ಫ್ಲೈಟ್ 6E-1486 ರಲ್ಲಿ ದುಬೈನಿಂದ ಆಗಮಿಸಿದ ಥೈಲ್ಯಾಂಡ್ ನ ಅಂತಾರಾಷ್ಟ್ರೀಯ ಪ್ರಯಾಣಿಕ, ವಿದೇಶಿ ಮೂಲದ ಚಿನ್ನವನ್ನು ಪೇಸ್ಟ್ ರೂಪದಲ್ಲಿ ನೆಟ್ ಡಬ್ಲ್ಯೂಟಿಯೊಂದಿಗೆ ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದಾಗ ತಡೆದು ತಪಾಸಣೆ ನಡೆಸಿ 50,79,967 ಮೌಲ್ಯದ 824.67 ಗ್ರಾಂ. ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…