#IndianCustomsAtWork ಅಪಾರ ಮೌಲ್ಯದ ಹಣ ಹಾಗೂ ಚಿನ್ನವನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಐನೂರು ಮುಖಬೆಲೆಯ 51,95,900 ರೂ. ಭಾರತೀಯ ಕರೆನ್ಸಿ ಹಾಗೂ 50,79,967 ರೂ. ಮೌಲ್ಯದ 824.67 ಗ್ರಾಂ. ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಇಬ್ಬರು ಪ್ರಯಾಣಿಕರು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದಲ್ಲಿ ಫೆ.29ರ ರಾತ್ರಿ ಹಾಗೂ ಮಾ.1ರ‌‌ ಮುಂಜಾನೆಯಲ್ಲಿ ಇಬ್ಬರು ಪ್ರಯಾಣಿಕರನ್ನ ತಪಾಸಣೆ ನಡೆಸಿದಾಗ ಹಣ‌ ಮತ್ತು ಚಿನ್ನ ಕಳ್ಳಸಾಗಾಣಿಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಒಡಿ-242 ವಿಮಾನದ ಮೂಲಕ ಕೌಲಾಲಂಪುರ್‌ಗೆ INR 500 ಮುಖಬೆಲೆಯ ರೂ.51,95,500 ಮೊತ್ತದ ಭಾರತೀಯ ಕರೆನ್ಸಿಯನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಭಾರತೀಯ ನಾಗರಿಕರೊಬ್ಬರು ಪ್ರಯಾಣಿಕರ ಚೆಕ್ ಇನ್ ಬ್ಯಾಗೇಜ್‌ನಲ್ಲಿ ಹಣವನ್ನ ಮರೆಮಾಚಿದ್ದರು.‌ ತಪಾಸಣೆ ನಡೆಸಿ ಅದನ್ನ ಕೂಡಲೇ ವಶಪಡಿಸಿಕೊಳ್ಳಲಾಗಿದೆ.

ಮತ್ತೊಂದು ಘಟನೆಯಲ್ಲಿ, ಇಂಡಿಗೋ ಫ್ಲೈಟ್ 6E-1486 ರಲ್ಲಿ ದುಬೈನಿಂದ ಆಗಮಿಸಿದ ಥೈಲ್ಯಾಂಡ್ ನ ಅಂತಾರಾಷ್ಟ್ರೀಯ ಪ್ರಯಾಣಿಕ, ವಿದೇಶಿ ಮೂಲದ ಚಿನ್ನವನ್ನು ಪೇಸ್ಟ್ ರೂಪದಲ್ಲಿ ನೆಟ್ ಡಬ್ಲ್ಯೂಟಿಯೊಂದಿಗೆ ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದಾಗ ತಡೆದು ತಪಾಸಣೆ ನಡೆಸಿ 50,79,967 ಮೌಲ್ಯದ 824.67 ಗ್ರಾಂ. ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು‌ ತಿಳಿಸಿದ್ದಾರೆ.

Ramesh Babu

Journalist

Recent Posts

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

21 minutes ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

25 minutes ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

13 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

15 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

15 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

16 hours ago