ಐನೂರು ಮುಖಬೆಲೆಯ 51,95,900 ರೂ. ಭಾರತೀಯ ಕರೆನ್ಸಿ ಹಾಗೂ 50,79,967 ರೂ. ಮೌಲ್ಯದ 824.67 ಗ್ರಾಂ. ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಇಬ್ಬರು ಪ್ರಯಾಣಿಕರು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಫೆ.29ರ ರಾತ್ರಿ ಹಾಗೂ ಮಾ.1ರ ಮುಂಜಾನೆಯಲ್ಲಿ ಇಬ್ಬರು ಪ್ರಯಾಣಿಕರನ್ನ ತಪಾಸಣೆ ನಡೆಸಿದಾಗ ಹಣ ಮತ್ತು ಚಿನ್ನ ಕಳ್ಳಸಾಗಾಣಿಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಒಡಿ-242 ವಿಮಾನದ ಮೂಲಕ ಕೌಲಾಲಂಪುರ್ಗೆ INR 500 ಮುಖಬೆಲೆಯ ರೂ.51,95,500 ಮೊತ್ತದ ಭಾರತೀಯ ಕರೆನ್ಸಿಯನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಭಾರತೀಯ ನಾಗರಿಕರೊಬ್ಬರು ಪ್ರಯಾಣಿಕರ ಚೆಕ್ ಇನ್ ಬ್ಯಾಗೇಜ್ನಲ್ಲಿ ಹಣವನ್ನ ಮರೆಮಾಚಿದ್ದರು. ತಪಾಸಣೆ ನಡೆಸಿ ಅದನ್ನ ಕೂಡಲೇ ವಶಪಡಿಸಿಕೊಳ್ಳಲಾಗಿದೆ.
ಮತ್ತೊಂದು ಘಟನೆಯಲ್ಲಿ, ಇಂಡಿಗೋ ಫ್ಲೈಟ್ 6E-1486 ರಲ್ಲಿ ದುಬೈನಿಂದ ಆಗಮಿಸಿದ ಥೈಲ್ಯಾಂಡ್ ನ ಅಂತಾರಾಷ್ಟ್ರೀಯ ಪ್ರಯಾಣಿಕ, ವಿದೇಶಿ ಮೂಲದ ಚಿನ್ನವನ್ನು ಪೇಸ್ಟ್ ರೂಪದಲ್ಲಿ ನೆಟ್ ಡಬ್ಲ್ಯೂಟಿಯೊಂದಿಗೆ ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದಾಗ ತಡೆದು ತಪಾಸಣೆ ನಡೆಸಿ 50,79,967 ಮೌಲ್ಯದ 824.67 ಗ್ರಾಂ. ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…