ಐನೂರು ಮುಖಬೆಲೆಯ 51,95,900 ರೂ. ಭಾರತೀಯ ಕರೆನ್ಸಿ ಹಾಗೂ 50,79,967 ರೂ. ಮೌಲ್ಯದ 824.67 ಗ್ರಾಂ. ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಇಬ್ಬರು ಪ್ರಯಾಣಿಕರು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಫೆ.29ರ ರಾತ್ರಿ ಹಾಗೂ ಮಾ.1ರ ಮುಂಜಾನೆಯಲ್ಲಿ ಇಬ್ಬರು ಪ್ರಯಾಣಿಕರನ್ನ ತಪಾಸಣೆ ನಡೆಸಿದಾಗ ಹಣ ಮತ್ತು ಚಿನ್ನ ಕಳ್ಳಸಾಗಾಣಿಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಒಡಿ-242 ವಿಮಾನದ ಮೂಲಕ ಕೌಲಾಲಂಪುರ್ಗೆ INR 500 ಮುಖಬೆಲೆಯ ರೂ.51,95,500 ಮೊತ್ತದ ಭಾರತೀಯ ಕರೆನ್ಸಿಯನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಭಾರತೀಯ ನಾಗರಿಕರೊಬ್ಬರು ಪ್ರಯಾಣಿಕರ ಚೆಕ್ ಇನ್ ಬ್ಯಾಗೇಜ್ನಲ್ಲಿ ಹಣವನ್ನ ಮರೆಮಾಚಿದ್ದರು. ತಪಾಸಣೆ ನಡೆಸಿ ಅದನ್ನ ಕೂಡಲೇ ವಶಪಡಿಸಿಕೊಳ್ಳಲಾಗಿದೆ.
ಮತ್ತೊಂದು ಘಟನೆಯಲ್ಲಿ, ಇಂಡಿಗೋ ಫ್ಲೈಟ್ 6E-1486 ರಲ್ಲಿ ದುಬೈನಿಂದ ಆಗಮಿಸಿದ ಥೈಲ್ಯಾಂಡ್ ನ ಅಂತಾರಾಷ್ಟ್ರೀಯ ಪ್ರಯಾಣಿಕ, ವಿದೇಶಿ ಮೂಲದ ಚಿನ್ನವನ್ನು ಪೇಸ್ಟ್ ರೂಪದಲ್ಲಿ ನೆಟ್ ಡಬ್ಲ್ಯೂಟಿಯೊಂದಿಗೆ ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದಾಗ ತಡೆದು ತಪಾಸಣೆ ನಡೆಸಿ 50,79,967 ಮೌಲ್ಯದ 824.67 ಗ್ರಾಂ. ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…