ಫಾಕ್ಸ್ಕಾನ್ ಕಂಪನಿಗೆ 300 ಎಕರೆ ಜಮೀನನ್ನು ಯಾವಾಗ ಹಸ್ತಾಂತರ ಮಾಡಲಾಗುತ್ತದೆ ಎಂದು ಶಾಸಕ ಧೀರಜ್ಮುನಿರಾಜ್ ಅವರು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರಿಗೆ ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನೆ ಮಾಡಿದಾಗ ಸಕಾರಾತ್ಮಕ ಉತ್ತರ ನೀಡಿದ ಸಚಿವ ಎಂ.ಬಿ.ಪಾಟೀಲ್, ಕರ್ನಾಟಕಕ್ಕೆ ಐಫೋನ್ ಘಟಕ ಬರುವುದು ಖಚಿತವಾಗಿದೆ. ಐಫೋನ್ ತಯಾರಿಸುವ ಬಹುರಾಷ್ಟ್ರೀಯ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ ಕೊಡುವುದಾಗಿ ಸರಕಾರ ಘೋಷಿಸಿದೆ. ಜಮೀನು ಹಸ್ತಾಂತರಿಸುವ ಸಂಬಂಧ ಇದ್ದ ಕಾನೂನು ತೊಡಕುಗಳನ್ನು ನಿವಾರಿಸಲಾಗಿದೆ. ಶೀಘ್ರವೇ ಕಂಪನಿಗೆ ಜಾಗ ಹಸ್ತಾಂತರಿಸಲಾಗುವುದು ಎಂದರು.
ಕಂಪನಿಗೆ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ಹೋಬಳಿಗೆ ಸೇರಿದ ಮಾಹಿತಿ ತಂತ್ರಜ್ಞಾನ ಹೂಡಿಕೆ ವಲಯ (ಐ ಟಿ ಐ ಆರ್) ದಲ್ಲಿ 300 ಎಕರೆ ಜಾಗ ಕೊಡಲಾಗುತ್ತದೆ. ಕಂಪನಿ ಸುಮಾರು 8,500 ಕೋಟಿ ರೂ. ಹೂಡಿ, ತಯಾರಿಕಾ ಘಟಕ ಸ್ಥಾಪಿಸಲಿದೆ. ಭೂಮಿ ಹಸ್ತಾಂತರವಾಗುತ್ತಿದ್ದಂತೆ ಕಂಪನಿಯು ನಿರ್ಮಾಣ ಕಾಮಗಾರಿ ಶುರು ಮಾಡಬಹುದು. ನಿರೀಕ್ಷೆ ಪ್ರಕಾರ ಮುಂದಿನ ವರ್ಷ ಉತ್ಪಾದನೆ ಕೂಡ ಆರಂಭಿಸಲಿದೆ. 50 ಸಾವಿರ ಜನರಿಗೆ ಉದ್ಯೋಗ ದೊರಕಿಸುವ ಈ ಯೋಜನೆಯ ಬಗ್ಗೆ ಸರ್ಕಾರ ಮುತುವರ್ಜಿ ವಹಿಸಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ 3 ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಇವು ಸುಮಾರು 110 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದು, 1,450ಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಿವೆ.
ಈ ಸಂಬಂಧ ದೊಡ್ಡಬಳ್ಳಾಪುರದ ಶಾಸಕ ಧೀರಜ್ ಮುನಿರಾಜು ಅವರು ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ವಿಧಾನಸಭೆಯಲ್ಲಿ ಉತ್ತರ ನೀಡಿದ ಎಂ ಬಿ ಪಾಟೀಲ್ ಅವರು ಈ ಘೋಷಣೆ ಮಾಡಿದ್ದಾರೆ. ಅಲ್ಲದೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲೂ ಕೂಡ ಇದನ್ನು ಹಂಚಿಕೊಂಡಿದ್ದಾರೆ.
ರಾಜ್ಯದಲ್ಲಿ ಐಫೋನ್ ಘಟಕ ಸ್ಥಾಪನೆಯಾಗುವುದರೊಂದಿಗೆ ಬೆಂಗಳೂರು ಸರಹದ್ದಿನಲ್ಲಿರುವ ಎರಡನೇ ಸ್ತರದ ನಗರಗಳು ಅಭಿವೃದ್ಧಿ ಹೊಂದಲು ಕಾರಣವಾಗಲಿದೆ. ದೊಡ್ಡಬಳ್ಳಾಪುರ ಸುತ್ತಮುತ್ತಲಿನ ಯುವಕರಿಗೆ ಆಶಾದಾಯಕವಾಗಲಿದೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…