ಫಾಕ್ಸ್ಕಾನ್ ಕಂಪನಿಗೆ 300 ಎಕರೆ ಜಮೀನನ್ನು ಯಾವಾಗ ಹಸ್ತಾಂತರ ಮಾಡಲಾಗುತ್ತದೆ ಎಂದು ಶಾಸಕ ಧೀರಜ್ಮುನಿರಾಜ್ ಅವರು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರಿಗೆ ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನೆ ಮಾಡಿದಾಗ ಸಕಾರಾತ್ಮಕ ಉತ್ತರ ನೀಡಿದ ಸಚಿವ ಎಂ.ಬಿ.ಪಾಟೀಲ್, ಕರ್ನಾಟಕಕ್ಕೆ ಐಫೋನ್ ಘಟಕ ಬರುವುದು ಖಚಿತವಾಗಿದೆ. ಐಫೋನ್ ತಯಾರಿಸುವ ಬಹುರಾಷ್ಟ್ರೀಯ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ ಕೊಡುವುದಾಗಿ ಸರಕಾರ ಘೋಷಿಸಿದೆ. ಜಮೀನು ಹಸ್ತಾಂತರಿಸುವ ಸಂಬಂಧ ಇದ್ದ ಕಾನೂನು ತೊಡಕುಗಳನ್ನು ನಿವಾರಿಸಲಾಗಿದೆ. ಶೀಘ್ರವೇ ಕಂಪನಿಗೆ ಜಾಗ ಹಸ್ತಾಂತರಿಸಲಾಗುವುದು ಎಂದರು.
ಕಂಪನಿಗೆ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ಹೋಬಳಿಗೆ ಸೇರಿದ ಮಾಹಿತಿ ತಂತ್ರಜ್ಞಾನ ಹೂಡಿಕೆ ವಲಯ (ಐ ಟಿ ಐ ಆರ್) ದಲ್ಲಿ 300 ಎಕರೆ ಜಾಗ ಕೊಡಲಾಗುತ್ತದೆ. ಕಂಪನಿ ಸುಮಾರು 8,500 ಕೋಟಿ ರೂ. ಹೂಡಿ, ತಯಾರಿಕಾ ಘಟಕ ಸ್ಥಾಪಿಸಲಿದೆ. ಭೂಮಿ ಹಸ್ತಾಂತರವಾಗುತ್ತಿದ್ದಂತೆ ಕಂಪನಿಯು ನಿರ್ಮಾಣ ಕಾಮಗಾರಿ ಶುರು ಮಾಡಬಹುದು. ನಿರೀಕ್ಷೆ ಪ್ರಕಾರ ಮುಂದಿನ ವರ್ಷ ಉತ್ಪಾದನೆ ಕೂಡ ಆರಂಭಿಸಲಿದೆ. 50 ಸಾವಿರ ಜನರಿಗೆ ಉದ್ಯೋಗ ದೊರಕಿಸುವ ಈ ಯೋಜನೆಯ ಬಗ್ಗೆ ಸರ್ಕಾರ ಮುತುವರ್ಜಿ ವಹಿಸಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ 3 ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಇವು ಸುಮಾರು 110 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದು, 1,450ಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಿವೆ.
ಈ ಸಂಬಂಧ ದೊಡ್ಡಬಳ್ಳಾಪುರದ ಶಾಸಕ ಧೀರಜ್ ಮುನಿರಾಜು ಅವರು ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ವಿಧಾನಸಭೆಯಲ್ಲಿ ಉತ್ತರ ನೀಡಿದ ಎಂ ಬಿ ಪಾಟೀಲ್ ಅವರು ಈ ಘೋಷಣೆ ಮಾಡಿದ್ದಾರೆ. ಅಲ್ಲದೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲೂ ಕೂಡ ಇದನ್ನು ಹಂಚಿಕೊಂಡಿದ್ದಾರೆ.
ರಾಜ್ಯದಲ್ಲಿ ಐಫೋನ್ ಘಟಕ ಸ್ಥಾಪನೆಯಾಗುವುದರೊಂದಿಗೆ ಬೆಂಗಳೂರು ಸರಹದ್ದಿನಲ್ಲಿರುವ ಎರಡನೇ ಸ್ತರದ ನಗರಗಳು ಅಭಿವೃದ್ಧಿ ಹೊಂದಲು ಕಾರಣವಾಗಲಿದೆ. ದೊಡ್ಡಬಳ್ಳಾಪುರ ಸುತ್ತಮುತ್ತಲಿನ ಯುವಕರಿಗೆ ಆಶಾದಾಯಕವಾಗಲಿದೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…