iPhone ತಯಾರಿಸೋ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಜಮೀನು ಶೀಘ್ರ ಹಸ್ತಾಂತರ: ಶಾಸಕ ಧೀರಜ್‌ಮುನಿರಾಜ್ ಅವರ ಪ್ರಶ್ನೆಗೆ ಸಕಾರಾತ್ಮಕ ಉತ್ತರ ನೀಡಿದ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್

 

ಫಾಕ್ಸ್‌ಕಾನ್ ಕಂಪನಿಗೆ 300 ಎಕರೆ ಜಮೀನನ್ನು ಯಾವಾಗ ಹಸ್ತಾಂತರ ಮಾಡಲಾಗುತ್ತದೆ ಎಂದು ಶಾಸಕ ಧೀರಜ್‌ಮುನಿರಾಜ್ ಅವರು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರಿಗೆ ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನೆ ಮಾಡಿದಾಗ ಸಕಾರಾತ್ಮಕ ಉತ್ತರ ನೀಡಿದ ಸಚಿವ ಎಂ.ಬಿ.ಪಾಟೀಲ್, ಕರ್ನಾಟಕಕ್ಕೆ ಐಫೋನ್ ಘಟಕ ಬರುವುದು ಖಚಿತವಾಗಿದೆ. ಐಫೋನ್ ತಯಾರಿಸುವ ಬಹುರಾಷ್ಟ್ರೀಯ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ ಕೊಡುವುದಾಗಿ ಸರಕಾರ ಘೋಷಿಸಿದೆ. ಜಮೀನು ಹಸ್ತಾಂತರಿಸುವ ಸಂಬಂಧ ಇದ್ದ ಕಾನೂನು ತೊಡಕುಗಳನ್ನು ನಿವಾರಿಸಲಾಗಿದೆ. ಶೀಘ್ರವೇ ಕಂಪನಿಗೆ ಜಾಗ ಹಸ್ತಾಂತರಿಸಲಾಗುವುದು ಎಂದರು.

ಕಂಪನಿಗೆ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ಹೋಬಳಿಗೆ ಸೇರಿದ ಮಾಹಿತಿ ತಂತ್ರಜ್ಞಾನ ಹೂಡಿಕೆ ವಲಯ (ಐ ಟಿ ಐ ಆರ್) ದಲ್ಲಿ 300 ಎಕರೆ ಜಾಗ ಕೊಡಲಾಗುತ್ತದೆ. ಕಂಪನಿ ಸುಮಾರು 8,500 ಕೋಟಿ ರೂ. ಹೂಡಿ, ತಯಾರಿಕಾ ಘಟಕ ಸ್ಥಾಪಿಸಲಿದೆ. ಭೂಮಿ ಹಸ್ತಾಂತರವಾಗುತ್ತಿದ್ದಂತೆ ಕಂಪನಿಯು ನಿರ್ಮಾಣ ಕಾಮಗಾರಿ ಶುರು ಮಾಡಬಹುದು. ನಿರೀಕ್ಷೆ ಪ್ರಕಾರ ಮುಂದಿನ ವರ್ಷ ಉತ್ಪಾದನೆ ಕೂಡ ಆರಂಭಿಸಲಿದೆ. 50 ಸಾವಿರ ಜನರಿಗೆ ಉದ್ಯೋಗ ದೊರಕಿಸುವ ಈ ಯೋಜನೆಯ ಬಗ್ಗೆ ಸರ್ಕಾರ ಮುತುವರ್ಜಿ ವಹಿಸಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ 3 ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಇವು ಸುಮಾರು 110 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದು, 1,450ಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಿವೆ.

ಈ ಸಂಬಂಧ ದೊಡ್ಡಬಳ್ಳಾಪುರದ ಶಾಸಕ ಧೀರಜ್ ಮುನಿರಾಜು ಅವರು ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ವಿಧಾನಸಭೆಯಲ್ಲಿ ಉತ್ತರ ನೀಡಿದ ಎಂ ಬಿ ಪಾಟೀಲ್ ಅವರು ಈ ಘೋಷಣೆ ಮಾಡಿದ್ದಾರೆ. ಅಲ್ಲದೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲೂ ಕೂಡ ಇದನ್ನು ಹಂಚಿಕೊಂಡಿದ್ದಾರೆ.

ರಾಜ್ಯದಲ್ಲಿ ಐಫೋನ್ ಘಟಕ ಸ್ಥಾಪನೆಯಾಗುವುದರೊಂದಿಗೆ ಬೆಂಗಳೂರು ಸರಹದ್ದಿನಲ್ಲಿರುವ ಎರಡನೇ ಸ್ತರದ ನಗರಗಳು ಅಭಿವೃದ್ಧಿ ಹೊಂದಲು ಕಾರಣವಾಗಲಿದೆ. ದೊಡ್ಡಬಳ್ಳಾಪುರ ಸುತ್ತಮುತ್ತಲಿನ ಯುವಕರಿಗೆ ಆಶಾದಾಯಕವಾಗಲಿದೆ.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

7 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

10 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

11 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

13 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

14 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

17 hours ago