iPhone ತಯಾರಿಸೋ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಜಮೀನು ಶೀಘ್ರ ಹಸ್ತಾಂತರ: ಶಾಸಕ ಧೀರಜ್‌ಮುನಿರಾಜ್ ಅವರ ಪ್ರಶ್ನೆಗೆ ಸಕಾರಾತ್ಮಕ ಉತ್ತರ ನೀಡಿದ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್

 

ಫಾಕ್ಸ್‌ಕಾನ್ ಕಂಪನಿಗೆ 300 ಎಕರೆ ಜಮೀನನ್ನು ಯಾವಾಗ ಹಸ್ತಾಂತರ ಮಾಡಲಾಗುತ್ತದೆ ಎಂದು ಶಾಸಕ ಧೀರಜ್‌ಮುನಿರಾಜ್ ಅವರು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರಿಗೆ ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನೆ ಮಾಡಿದಾಗ ಸಕಾರಾತ್ಮಕ ಉತ್ತರ ನೀಡಿದ ಸಚಿವ ಎಂ.ಬಿ.ಪಾಟೀಲ್, ಕರ್ನಾಟಕಕ್ಕೆ ಐಫೋನ್ ಘಟಕ ಬರುವುದು ಖಚಿತವಾಗಿದೆ. ಐಫೋನ್ ತಯಾರಿಸುವ ಬಹುರಾಷ್ಟ್ರೀಯ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ ಕೊಡುವುದಾಗಿ ಸರಕಾರ ಘೋಷಿಸಿದೆ. ಜಮೀನು ಹಸ್ತಾಂತರಿಸುವ ಸಂಬಂಧ ಇದ್ದ ಕಾನೂನು ತೊಡಕುಗಳನ್ನು ನಿವಾರಿಸಲಾಗಿದೆ. ಶೀಘ್ರವೇ ಕಂಪನಿಗೆ ಜಾಗ ಹಸ್ತಾಂತರಿಸಲಾಗುವುದು ಎಂದರು.

ಕಂಪನಿಗೆ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ಹೋಬಳಿಗೆ ಸೇರಿದ ಮಾಹಿತಿ ತಂತ್ರಜ್ಞಾನ ಹೂಡಿಕೆ ವಲಯ (ಐ ಟಿ ಐ ಆರ್) ದಲ್ಲಿ 300 ಎಕರೆ ಜಾಗ ಕೊಡಲಾಗುತ್ತದೆ. ಕಂಪನಿ ಸುಮಾರು 8,500 ಕೋಟಿ ರೂ. ಹೂಡಿ, ತಯಾರಿಕಾ ಘಟಕ ಸ್ಥಾಪಿಸಲಿದೆ. ಭೂಮಿ ಹಸ್ತಾಂತರವಾಗುತ್ತಿದ್ದಂತೆ ಕಂಪನಿಯು ನಿರ್ಮಾಣ ಕಾಮಗಾರಿ ಶುರು ಮಾಡಬಹುದು. ನಿರೀಕ್ಷೆ ಪ್ರಕಾರ ಮುಂದಿನ ವರ್ಷ ಉತ್ಪಾದನೆ ಕೂಡ ಆರಂಭಿಸಲಿದೆ. 50 ಸಾವಿರ ಜನರಿಗೆ ಉದ್ಯೋಗ ದೊರಕಿಸುವ ಈ ಯೋಜನೆಯ ಬಗ್ಗೆ ಸರ್ಕಾರ ಮುತುವರ್ಜಿ ವಹಿಸಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ 3 ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಇವು ಸುಮಾರು 110 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದು, 1,450ಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಿವೆ.

ಈ ಸಂಬಂಧ ದೊಡ್ಡಬಳ್ಳಾಪುರದ ಶಾಸಕ ಧೀರಜ್ ಮುನಿರಾಜು ಅವರು ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ವಿಧಾನಸಭೆಯಲ್ಲಿ ಉತ್ತರ ನೀಡಿದ ಎಂ ಬಿ ಪಾಟೀಲ್ ಅವರು ಈ ಘೋಷಣೆ ಮಾಡಿದ್ದಾರೆ. ಅಲ್ಲದೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲೂ ಕೂಡ ಇದನ್ನು ಹಂಚಿಕೊಂಡಿದ್ದಾರೆ.

ರಾಜ್ಯದಲ್ಲಿ ಐಫೋನ್ ಘಟಕ ಸ್ಥಾಪನೆಯಾಗುವುದರೊಂದಿಗೆ ಬೆಂಗಳೂರು ಸರಹದ್ದಿನಲ್ಲಿರುವ ಎರಡನೇ ಸ್ತರದ ನಗರಗಳು ಅಭಿವೃದ್ಧಿ ಹೊಂದಲು ಕಾರಣವಾಗಲಿದೆ. ದೊಡ್ಡಬಳ್ಳಾಪುರ ಸುತ್ತಮುತ್ತಲಿನ ಯುವಕರಿಗೆ ಆಶಾದಾಯಕವಾಗಲಿದೆ.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

4 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

5 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

9 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

10 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

15 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

17 hours ago