ಅಹಮದಾಬಾದ್: ಅತ್ಯಂತ ರೋಚಕತೆಯಿಂದ ಕೂಡಿದ್ದ 2023 ಐಪಿಎಲ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.
ವರುಣ ದೇವನ ಅವಕೃಪೆಯ ನಡುವೆಯೂ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ ಕೆ ಬೌಲಿಂಗ್ ಆಯ್ದುಕೊಂಡು ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಲಾಯಿತು.
ನಂತರ ಬಂದ ಯುವ ಆಟಗಾರ ಸಾಯಿ ಸುದರ್ಶನ್ (96) ಚೆನ್ನೈ ಬೌಲಿಂಗ್ ಪಡೆಯನ್ನು ಧೂಳಿಪಟ ಮಾಡಿದರು, ಇವರಿಗೆ ಸಾಥ್ ನೀಡಿದ ನಾಯಕ ಹಾರ್ದಿಕ್ ಪಾಂಡ್ಯ (21) ರನ್ ಗಳಿಸುವ ಮೂಲಕ ತಂಡವನ್ನು 214 ಗಡಿ ದಾಟಿಸಿದರು.
ಸಿಎಸ್ ಕೆ ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ವಾಡ್ (26) ಹಾಗೂ ಕಾನ್ವೆ (47) ಉತ್ತಮ ಅಡಿಪಾಯ ಹಾಕಿದರು, ನಂತರ ಬಂದ ರಹಾನೆ (27), ಶಿವಂ ದುಬೆ (37) , ರಾಯುಡು (19) ಹಾಗೂ ಮ್ಯಾಚ್ ವಿನ್ನರ್ ಆಲ್ ರೌಂಡರ್ ರವೀಂದ್ರ ಜಡೇಜಾ ಉಪಯುಕ್ತ (15) ರನ್ ಗಳಿಸುವ ಮೂಲಕ ಜಯವನ್ನು ತಂದುಕೊಟ್ಟರು.
ಐಪಿಎಲ್ ಗೆ ನಿವೃತ್ತಿ ಘೋಷಿಸಿದ ಅಂಬಾಟಿ ರಾಯುಡು ಅವರಿಗೆ ಟ್ರೋಫಿ ನೀಡಿದ್ದು ವಿಶೇಷವಾಗಿತ್ತು ಹಾಗೂ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಆಡುತ್ತೆನೆ ಎಂದು ಹೇಳುವ ಮೂಲಕ ಹಲವಾರು ಊಹಾಪೋಹಗಳಿಗೆ ಮಹೇಂದ್ರ ಸಿಂಗ್ ಧೋನಿ ತೆರೆ ಎಳೆದರು.
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…
ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…
ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…
ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…