Categories: ಐಪಿಎಲ್

IPL ಗೆದ್ದ ಸಿಎಸ್ ಕೆ; ಐದನೇ ಬಾರಿಗೆ ಟ್ರೋಫಿಗೆ ಮುತ್ತಿಟ್ಟ ಮಾಹಿ ಪಡೆ

ಅಹಮದಾಬಾದ್: ಅತ್ಯಂತ ರೋಚಕತೆಯಿಂದ ಕೂಡಿದ್ದ 2023 ಐಪಿಎಲ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

ವರುಣ ದೇವನ ಅವಕೃಪೆಯ ನಡುವೆಯೂ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ ಕೆ ಬೌಲಿಂಗ್ ಆಯ್ದುಕೊಂಡು ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಲಾಯಿತು.

ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರರಾದ ವೃದ್ಧಿಮಾನ್ ಸಾಹ (54) ಹಾಗೂ ಶುಭ್ಮನ್ ಗಿಲ್ (39) ಉತ್ತಮ ಅಡಿಪಾಯ ಹಾಕಿದರು, ಆದರೆ ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ಹಾಕಿದ ಬಾಲ್ ಗುರಿತಿಸುವಲ್ಲಿ ವಿಫಲವಾದ ಗಿಲ್ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಅವರ ಮಿಂಚಿನ ಸ್ಟಂಪಿಂಗ್ ಗೆ ಬಲಿಯಾದರು.

ನಂತರ ಬಂದ ಯುವ ಆಟಗಾರ ಸಾಯಿ ಸುದರ್ಶನ್ (96) ಚೆನ್ನೈ ಬೌಲಿಂಗ್ ಪಡೆಯನ್ನು ಧೂಳಿಪಟ ಮಾಡಿದರು, ಇವರಿಗೆ ಸಾಥ್ ನೀಡಿದ ನಾಯಕ ಹಾರ್ದಿಕ್ ಪಾಂಡ್ಯ (21) ರನ್ ಗಳಿಸುವ ಮೂಲಕ ತಂಡವನ್ನು 214 ಗಡಿ ದಾಟಿಸಿದರು.

ಗುರಿ ಬೆನ್ನತ್ತಿದ್ದ ಸೂಪರ್ ಕಿಂಗ್ಸ್ ಗೆ ವರುಣ ಅಡ್ಡಿಯಾದ, 12 ಗಂಟೆಯವರೆಗೂ ಪಂದ್ಯವನ್ನು ನೆಡೆಸಲು ಸಾಧ್ಯವಾಗಲಿಲ್ಲ, ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ 15 ಓವರ್ ಗಳಲ್ಲಿ ಸೂಪರ್ ಕಿಂಗ್ಸ್ ಗೆ 171ರನ್ ಗುರಿ ನೀಡಲಾಯಿತು.

ಸಿಎಸ್ ಕೆ ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ವಾಡ್ (26) ಹಾಗೂ ಕಾನ್ವೆ (47) ಉತ್ತಮ ಅಡಿಪಾಯ ಹಾಕಿದರು, ನಂತರ ಬಂದ ರಹಾನೆ (27), ಶಿವಂ ದುಬೆ (37) , ರಾಯುಡು (19) ಹಾಗೂ ಮ್ಯಾಚ್ ವಿನ್ನರ್ ಆಲ್ ರೌಂಡರ್ ರವೀಂದ್ರ ಜಡೇಜಾ ಉಪಯುಕ್ತ (15) ರನ್ ಗಳಿಸುವ ಮೂಲಕ ಜಯವನ್ನು ತಂದುಕೊಟ್ಟರು.

ವಿಜೇತ ತಂಡಕ್ಕೆ ಟ್ರೋಫಿ, 20 ಕೋಟಿ ರೂಪಾಯಿ ಹಾಗೂ ರನ್ನರ್ ಆಫ್ ತಂಡ ಗುಜರಾತ್ ಟೈಟಾನ್ಸ್ ತಂಡಕ್ಕೆ 12.5 ಕೋಟಿ ರೂಪಾಯಿ ಬಹುಮಾನ ವಿತರಿಸಲಾಯಿತು, ಅದ್ಭುತ ಪ್ರದರ್ಶನ ನೀಡಿದ ಕಾನ್ವೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಹಾಗೂ ಶುಭ್ಮನ್ ಗಿಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

ಐಪಿಎಲ್ ಗೆ ನಿವೃತ್ತಿ ಘೋಷಿಸಿದ ಅಂಬಾಟಿ ರಾಯುಡು ಅವರಿಗೆ ಟ್ರೋಫಿ ನೀಡಿದ್ದು ವಿಶೇಷವಾಗಿತ್ತು ಹಾಗೂ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಆಡುತ್ತೆನೆ ಎಂದು ಹೇಳುವ ಮೂಲಕ ಹಲವಾರು ಊಹಾಪೋಹಗಳಿಗೆ ಮಹೇಂದ್ರ ಸಿಂಗ್ ಧೋನಿ ತೆರೆ ಎಳೆದರು.

Ramesh Babu

Journalist

Recent Posts

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

9 minutes ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

11 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

11 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

15 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

17 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

20 hours ago