Categories: ಐಪಿಎಲ್

IPL ಗೆದ್ದ ಸಿಎಸ್ ಕೆ; ಐದನೇ ಬಾರಿಗೆ ಟ್ರೋಫಿಗೆ ಮುತ್ತಿಟ್ಟ ಮಾಹಿ ಪಡೆ

ಅಹಮದಾಬಾದ್: ಅತ್ಯಂತ ರೋಚಕತೆಯಿಂದ ಕೂಡಿದ್ದ 2023 ಐಪಿಎಲ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

ವರುಣ ದೇವನ ಅವಕೃಪೆಯ ನಡುವೆಯೂ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ ಕೆ ಬೌಲಿಂಗ್ ಆಯ್ದುಕೊಂಡು ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಲಾಯಿತು.

ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರರಾದ ವೃದ್ಧಿಮಾನ್ ಸಾಹ (54) ಹಾಗೂ ಶುಭ್ಮನ್ ಗಿಲ್ (39) ಉತ್ತಮ ಅಡಿಪಾಯ ಹಾಕಿದರು, ಆದರೆ ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ಹಾಕಿದ ಬಾಲ್ ಗುರಿತಿಸುವಲ್ಲಿ ವಿಫಲವಾದ ಗಿಲ್ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಅವರ ಮಿಂಚಿನ ಸ್ಟಂಪಿಂಗ್ ಗೆ ಬಲಿಯಾದರು.

ನಂತರ ಬಂದ ಯುವ ಆಟಗಾರ ಸಾಯಿ ಸುದರ್ಶನ್ (96) ಚೆನ್ನೈ ಬೌಲಿಂಗ್ ಪಡೆಯನ್ನು ಧೂಳಿಪಟ ಮಾಡಿದರು, ಇವರಿಗೆ ಸಾಥ್ ನೀಡಿದ ನಾಯಕ ಹಾರ್ದಿಕ್ ಪಾಂಡ್ಯ (21) ರನ್ ಗಳಿಸುವ ಮೂಲಕ ತಂಡವನ್ನು 214 ಗಡಿ ದಾಟಿಸಿದರು.

ಗುರಿ ಬೆನ್ನತ್ತಿದ್ದ ಸೂಪರ್ ಕಿಂಗ್ಸ್ ಗೆ ವರುಣ ಅಡ್ಡಿಯಾದ, 12 ಗಂಟೆಯವರೆಗೂ ಪಂದ್ಯವನ್ನು ನೆಡೆಸಲು ಸಾಧ್ಯವಾಗಲಿಲ್ಲ, ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ 15 ಓವರ್ ಗಳಲ್ಲಿ ಸೂಪರ್ ಕಿಂಗ್ಸ್ ಗೆ 171ರನ್ ಗುರಿ ನೀಡಲಾಯಿತು.

ಸಿಎಸ್ ಕೆ ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ವಾಡ್ (26) ಹಾಗೂ ಕಾನ್ವೆ (47) ಉತ್ತಮ ಅಡಿಪಾಯ ಹಾಕಿದರು, ನಂತರ ಬಂದ ರಹಾನೆ (27), ಶಿವಂ ದುಬೆ (37) , ರಾಯುಡು (19) ಹಾಗೂ ಮ್ಯಾಚ್ ವಿನ್ನರ್ ಆಲ್ ರೌಂಡರ್ ರವೀಂದ್ರ ಜಡೇಜಾ ಉಪಯುಕ್ತ (15) ರನ್ ಗಳಿಸುವ ಮೂಲಕ ಜಯವನ್ನು ತಂದುಕೊಟ್ಟರು.

ವಿಜೇತ ತಂಡಕ್ಕೆ ಟ್ರೋಫಿ, 20 ಕೋಟಿ ರೂಪಾಯಿ ಹಾಗೂ ರನ್ನರ್ ಆಫ್ ತಂಡ ಗುಜರಾತ್ ಟೈಟಾನ್ಸ್ ತಂಡಕ್ಕೆ 12.5 ಕೋಟಿ ರೂಪಾಯಿ ಬಹುಮಾನ ವಿತರಿಸಲಾಯಿತು, ಅದ್ಭುತ ಪ್ರದರ್ಶನ ನೀಡಿದ ಕಾನ್ವೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಹಾಗೂ ಶುಭ್ಮನ್ ಗಿಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

ಐಪಿಎಲ್ ಗೆ ನಿವೃತ್ತಿ ಘೋಷಿಸಿದ ಅಂಬಾಟಿ ರಾಯುಡು ಅವರಿಗೆ ಟ್ರೋಫಿ ನೀಡಿದ್ದು ವಿಶೇಷವಾಗಿತ್ತು ಹಾಗೂ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಆಡುತ್ತೆನೆ ಎಂದು ಹೇಳುವ ಮೂಲಕ ಹಲವಾರು ಊಹಾಪೋಹಗಳಿಗೆ ಮಹೇಂದ್ರ ಸಿಂಗ್ ಧೋನಿ ತೆರೆ ಎಳೆದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago