ಅಹಮದಾಬಾದ್: ಅತ್ಯಂತ ರೋಚಕತೆಯಿಂದ ಕೂಡಿದ್ದ 2023 ಐಪಿಎಲ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.
ವರುಣ ದೇವನ ಅವಕೃಪೆಯ ನಡುವೆಯೂ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ ಕೆ ಬೌಲಿಂಗ್ ಆಯ್ದುಕೊಂಡು ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಲಾಯಿತು.
ನಂತರ ಬಂದ ಯುವ ಆಟಗಾರ ಸಾಯಿ ಸುದರ್ಶನ್ (96) ಚೆನ್ನೈ ಬೌಲಿಂಗ್ ಪಡೆಯನ್ನು ಧೂಳಿಪಟ ಮಾಡಿದರು, ಇವರಿಗೆ ಸಾಥ್ ನೀಡಿದ ನಾಯಕ ಹಾರ್ದಿಕ್ ಪಾಂಡ್ಯ (21) ರನ್ ಗಳಿಸುವ ಮೂಲಕ ತಂಡವನ್ನು 214 ಗಡಿ ದಾಟಿಸಿದರು.
ಸಿಎಸ್ ಕೆ ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ವಾಡ್ (26) ಹಾಗೂ ಕಾನ್ವೆ (47) ಉತ್ತಮ ಅಡಿಪಾಯ ಹಾಕಿದರು, ನಂತರ ಬಂದ ರಹಾನೆ (27), ಶಿವಂ ದುಬೆ (37) , ರಾಯುಡು (19) ಹಾಗೂ ಮ್ಯಾಚ್ ವಿನ್ನರ್ ಆಲ್ ರೌಂಡರ್ ರವೀಂದ್ರ ಜಡೇಜಾ ಉಪಯುಕ್ತ (15) ರನ್ ಗಳಿಸುವ ಮೂಲಕ ಜಯವನ್ನು ತಂದುಕೊಟ್ಟರು.
ಐಪಿಎಲ್ ಗೆ ನಿವೃತ್ತಿ ಘೋಷಿಸಿದ ಅಂಬಾಟಿ ರಾಯುಡು ಅವರಿಗೆ ಟ್ರೋಫಿ ನೀಡಿದ್ದು ವಿಶೇಷವಾಗಿತ್ತು ಹಾಗೂ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಆಡುತ್ತೆನೆ ಎಂದು ಹೇಳುವ ಮೂಲಕ ಹಲವಾರು ಊಹಾಪೋಹಗಳಿಗೆ ಮಹೇಂದ್ರ ಸಿಂಗ್ ಧೋನಿ ತೆರೆ ಎಳೆದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…