Categories: ಐಪಿಎಲ್

IPL ಗೆದ್ದ ಸಿಎಸ್ ಕೆ; ಐದನೇ ಬಾರಿಗೆ ಟ್ರೋಫಿಗೆ ಮುತ್ತಿಟ್ಟ ಮಾಹಿ ಪಡೆ

ಅಹಮದಾಬಾದ್: ಅತ್ಯಂತ ರೋಚಕತೆಯಿಂದ ಕೂಡಿದ್ದ 2023 ಐಪಿಎಲ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

ವರುಣ ದೇವನ ಅವಕೃಪೆಯ ನಡುವೆಯೂ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ ಕೆ ಬೌಲಿಂಗ್ ಆಯ್ದುಕೊಂಡು ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಲಾಯಿತು.

ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರರಾದ ವೃದ್ಧಿಮಾನ್ ಸಾಹ (54) ಹಾಗೂ ಶುಭ್ಮನ್ ಗಿಲ್ (39) ಉತ್ತಮ ಅಡಿಪಾಯ ಹಾಕಿದರು, ಆದರೆ ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ಹಾಕಿದ ಬಾಲ್ ಗುರಿತಿಸುವಲ್ಲಿ ವಿಫಲವಾದ ಗಿಲ್ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಅವರ ಮಿಂಚಿನ ಸ್ಟಂಪಿಂಗ್ ಗೆ ಬಲಿಯಾದರು.

ನಂತರ ಬಂದ ಯುವ ಆಟಗಾರ ಸಾಯಿ ಸುದರ್ಶನ್ (96) ಚೆನ್ನೈ ಬೌಲಿಂಗ್ ಪಡೆಯನ್ನು ಧೂಳಿಪಟ ಮಾಡಿದರು, ಇವರಿಗೆ ಸಾಥ್ ನೀಡಿದ ನಾಯಕ ಹಾರ್ದಿಕ್ ಪಾಂಡ್ಯ (21) ರನ್ ಗಳಿಸುವ ಮೂಲಕ ತಂಡವನ್ನು 214 ಗಡಿ ದಾಟಿಸಿದರು.

ಗುರಿ ಬೆನ್ನತ್ತಿದ್ದ ಸೂಪರ್ ಕಿಂಗ್ಸ್ ಗೆ ವರುಣ ಅಡ್ಡಿಯಾದ, 12 ಗಂಟೆಯವರೆಗೂ ಪಂದ್ಯವನ್ನು ನೆಡೆಸಲು ಸಾಧ್ಯವಾಗಲಿಲ್ಲ, ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ 15 ಓವರ್ ಗಳಲ್ಲಿ ಸೂಪರ್ ಕಿಂಗ್ಸ್ ಗೆ 171ರನ್ ಗುರಿ ನೀಡಲಾಯಿತು.

ಸಿಎಸ್ ಕೆ ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ವಾಡ್ (26) ಹಾಗೂ ಕಾನ್ವೆ (47) ಉತ್ತಮ ಅಡಿಪಾಯ ಹಾಕಿದರು, ನಂತರ ಬಂದ ರಹಾನೆ (27), ಶಿವಂ ದುಬೆ (37) , ರಾಯುಡು (19) ಹಾಗೂ ಮ್ಯಾಚ್ ವಿನ್ನರ್ ಆಲ್ ರೌಂಡರ್ ರವೀಂದ್ರ ಜಡೇಜಾ ಉಪಯುಕ್ತ (15) ರನ್ ಗಳಿಸುವ ಮೂಲಕ ಜಯವನ್ನು ತಂದುಕೊಟ್ಟರು.

ವಿಜೇತ ತಂಡಕ್ಕೆ ಟ್ರೋಫಿ, 20 ಕೋಟಿ ರೂಪಾಯಿ ಹಾಗೂ ರನ್ನರ್ ಆಫ್ ತಂಡ ಗುಜರಾತ್ ಟೈಟಾನ್ಸ್ ತಂಡಕ್ಕೆ 12.5 ಕೋಟಿ ರೂಪಾಯಿ ಬಹುಮಾನ ವಿತರಿಸಲಾಯಿತು, ಅದ್ಭುತ ಪ್ರದರ್ಶನ ನೀಡಿದ ಕಾನ್ವೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಹಾಗೂ ಶುಭ್ಮನ್ ಗಿಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

ಐಪಿಎಲ್ ಗೆ ನಿವೃತ್ತಿ ಘೋಷಿಸಿದ ಅಂಬಾಟಿ ರಾಯುಡು ಅವರಿಗೆ ಟ್ರೋಫಿ ನೀಡಿದ್ದು ವಿಶೇಷವಾಗಿತ್ತು ಹಾಗೂ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಆಡುತ್ತೆನೆ ಎಂದು ಹೇಳುವ ಮೂಲಕ ಹಲವಾರು ಊಹಾಪೋಹಗಳಿಗೆ ಮಹೇಂದ್ರ ಸಿಂಗ್ ಧೋನಿ ತೆರೆ ಎಳೆದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

5 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

6 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

21 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago