ಅಹಮದಾಬಾದ್: ಅತ್ಯಂತ ರೋಚಕತೆಯಿಂದ ಕೂಡಿದ್ದ 2023 ಐಪಿಎಲ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.
ವರುಣ ದೇವನ ಅವಕೃಪೆಯ ನಡುವೆಯೂ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ ಕೆ ಬೌಲಿಂಗ್ ಆಯ್ದುಕೊಂಡು ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಲಾಯಿತು.
ನಂತರ ಬಂದ ಯುವ ಆಟಗಾರ ಸಾಯಿ ಸುದರ್ಶನ್ (96) ಚೆನ್ನೈ ಬೌಲಿಂಗ್ ಪಡೆಯನ್ನು ಧೂಳಿಪಟ ಮಾಡಿದರು, ಇವರಿಗೆ ಸಾಥ್ ನೀಡಿದ ನಾಯಕ ಹಾರ್ದಿಕ್ ಪಾಂಡ್ಯ (21) ರನ್ ಗಳಿಸುವ ಮೂಲಕ ತಂಡವನ್ನು 214 ಗಡಿ ದಾಟಿಸಿದರು.
ಸಿಎಸ್ ಕೆ ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ವಾಡ್ (26) ಹಾಗೂ ಕಾನ್ವೆ (47) ಉತ್ತಮ ಅಡಿಪಾಯ ಹಾಕಿದರು, ನಂತರ ಬಂದ ರಹಾನೆ (27), ಶಿವಂ ದುಬೆ (37) , ರಾಯುಡು (19) ಹಾಗೂ ಮ್ಯಾಚ್ ವಿನ್ನರ್ ಆಲ್ ರೌಂಡರ್ ರವೀಂದ್ರ ಜಡೇಜಾ ಉಪಯುಕ್ತ (15) ರನ್ ಗಳಿಸುವ ಮೂಲಕ ಜಯವನ್ನು ತಂದುಕೊಟ್ಟರು.
ಐಪಿಎಲ್ ಗೆ ನಿವೃತ್ತಿ ಘೋಷಿಸಿದ ಅಂಬಾಟಿ ರಾಯುಡು ಅವರಿಗೆ ಟ್ರೋಫಿ ನೀಡಿದ್ದು ವಿಶೇಷವಾಗಿತ್ತು ಹಾಗೂ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಆಡುತ್ತೆನೆ ಎಂದು ಹೇಳುವ ಮೂಲಕ ಹಲವಾರು ಊಹಾಪೋಹಗಳಿಗೆ ಮಹೇಂದ್ರ ಸಿಂಗ್ ಧೋನಿ ತೆರೆ ಎಳೆದರು.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…
ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…
ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…
ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…
ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…