ಸುಮಾರು 60 ದಿನಗಳ ಕಾಲ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣ ಬಡಿಸಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಇಂದು ತೆರೆ ಬೀಳಲಿದೆ.
18ನೇ ಆವೃತ್ತಿಯ ಐಪಿಎಲ್ ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಟ ನಡೆಸಲಿವೆ.
ಉಭಯ ತಂಡಗಳು ಸತತ 17 ವರ್ಷ ಕಠಿಣ ತಪ್ಪಸ್ಸನ್ನೇ ಮಾಡಿದ್ದು, ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿವೆ. ಇಬ್ಬರಲ್ಲಿ ಒಬ್ಬರ 17 ವರ್ಷಗಳ ವನವಾಸಕ್ಕೆ ಇಂದು ತೆರೆ ಬೀಳಲಿದೆ.
ಟ್ರೋಫಿಯ ಮೇಲೆ ಯಾವ ತಂಡದ ಹೆಸರು ಮುದ್ರಣವಾಗಲಿದೆ ಎಂಬುದು ಸದ್ಯ ಕುತೂಹಲ ಮೂಡಿಸಿದೆ.
ಇದೆಲ್ಲದರ ನಡುವೆ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಆರ್ ಸಿ ಬಿ ಫ್ಯಾನ್ಸ್ ವಿನೂತನವಾಗಿ ಆರ್ ಸಿ ಬಿ ಟೀಮ್ ಗೆ ಸಪೋರ್ಟ್ ಮಾಡಿ ಎಂದು ಡಂಗೂರ ಸಾರುವ ಮೂಲಕ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.
ಗ್ರಾಮದ ಪ್ರಮುಖ ಬೀದಿ ಬೀದಿಗಳಲ್ಲಿ ತಮಟೆ ಹೊಡೆದು ಆರ್ ಸಿ ಬಿ ಟೀಮ್ ಗೆ ಸಪೋರ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.
ಸಂಜೆ ನಡೆಯಲಿರುವ ಪಂದ್ಯ ವೀಕ್ಷಣೆಗೆ ಗ್ರಾಮದಲ್ಲಿ ಎಲ್ಇಡಿ ಸ್ಕ್ರೀನ್ ವ್ಯವಸ್ಥೆ ಕೂಡ ಮಾಡಲಾಗಿದೆ.
ಸದ್ಯ ಫೈನಲ್ ಪಂದ್ಯ ವೀಕ್ಷಣೆ ಮಾಡಲು ಗ್ರಾಮದ ಜನರು ಕಾತುರದಿಂದ ಕಾಯುತ್ತಿದ್ದಾರೆ.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…