ಸುಮಾರು 60 ದಿನಗಳ ಕಾಲ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣ ಬಡಿಸಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಇಂದು ತೆರೆ ಬೀಳಲಿದೆ.
18ನೇ ಆವೃತ್ತಿಯ ಐಪಿಎಲ್ ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಟ ನಡೆಸಲಿವೆ.
ಉಭಯ ತಂಡಗಳು ಸತತ 17 ವರ್ಷ ಕಠಿಣ ತಪ್ಪಸ್ಸನ್ನೇ ಮಾಡಿದ್ದು, ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿವೆ. ಇಬ್ಬರಲ್ಲಿ ಒಬ್ಬರ 17 ವರ್ಷಗಳ ವನವಾಸಕ್ಕೆ ಇಂದು ತೆರೆ ಬೀಳಲಿದೆ.
ಟ್ರೋಫಿಯ ಮೇಲೆ ಯಾವ ತಂಡದ ಹೆಸರು ಮುದ್ರಣವಾಗಲಿದೆ ಎಂಬುದು ಸದ್ಯ ಕುತೂಹಲ ಮೂಡಿಸಿದೆ.
ಇದೆಲ್ಲದರ ನಡುವೆ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಆರ್ ಸಿ ಬಿ ಫ್ಯಾನ್ಸ್ ವಿನೂತನವಾಗಿ ಆರ್ ಸಿ ಬಿ ಟೀಮ್ ಗೆ ಸಪೋರ್ಟ್ ಮಾಡಿ ಎಂದು ಡಂಗೂರ ಸಾರುವ ಮೂಲಕ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.
ಗ್ರಾಮದ ಪ್ರಮುಖ ಬೀದಿ ಬೀದಿಗಳಲ್ಲಿ ತಮಟೆ ಹೊಡೆದು ಆರ್ ಸಿ ಬಿ ಟೀಮ್ ಗೆ ಸಪೋರ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.
ಸಂಜೆ ನಡೆಯಲಿರುವ ಪಂದ್ಯ ವೀಕ್ಷಣೆಗೆ ಗ್ರಾಮದಲ್ಲಿ ಎಲ್ಇಡಿ ಸ್ಕ್ರೀನ್ ವ್ಯವಸ್ಥೆ ಕೂಡ ಮಾಡಲಾಗಿದೆ.
ಸದ್ಯ ಫೈನಲ್ ಪಂದ್ಯ ವೀಕ್ಷಣೆ ಮಾಡಲು ಗ್ರಾಮದ ಜನರು ಕಾತುರದಿಂದ ಕಾಯುತ್ತಿದ್ದಾರೆ.
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…
ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…