ಸುಮಾರು 60 ದಿನಗಳ ಕಾಲ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣ ಬಡಿಸಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಇಂದು ತೆರೆ ಬೀಳಲಿದೆ.
18ನೇ ಆವೃತ್ತಿಯ ಐಪಿಎಲ್ ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಟ ನಡೆಸಲಿವೆ.
ಉಭಯ ತಂಡಗಳು ಸತತ 17 ವರ್ಷ ಕಠಿಣ ತಪ್ಪಸ್ಸನ್ನೇ ಮಾಡಿದ್ದು, ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿವೆ. ಇಬ್ಬರಲ್ಲಿ ಒಬ್ಬರ 17 ವರ್ಷಗಳ ವನವಾಸಕ್ಕೆ ಇಂದು ತೆರೆ ಬೀಳಲಿದೆ.
ಟ್ರೋಫಿಯ ಮೇಲೆ ಯಾವ ತಂಡದ ಹೆಸರು ಮುದ್ರಣವಾಗಲಿದೆ ಎಂಬುದು ಸದ್ಯ ಕುತೂಹಲ ಮೂಡಿಸಿದೆ.
ಇದೆಲ್ಲದರ ನಡುವೆ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಆರ್ ಸಿ ಬಿ ಫ್ಯಾನ್ಸ್ ವಿನೂತನವಾಗಿ ಆರ್ ಸಿ ಬಿ ಟೀಮ್ ಗೆ ಸಪೋರ್ಟ್ ಮಾಡಿ ಎಂದು ಡಂಗೂರ ಸಾರುವ ಮೂಲಕ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.
ಗ್ರಾಮದ ಪ್ರಮುಖ ಬೀದಿ ಬೀದಿಗಳಲ್ಲಿ ತಮಟೆ ಹೊಡೆದು ಆರ್ ಸಿ ಬಿ ಟೀಮ್ ಗೆ ಸಪೋರ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.
ಸಂಜೆ ನಡೆಯಲಿರುವ ಪಂದ್ಯ ವೀಕ್ಷಣೆಗೆ ಗ್ರಾಮದಲ್ಲಿ ಎಲ್ಇಡಿ ಸ್ಕ್ರೀನ್ ವ್ಯವಸ್ಥೆ ಕೂಡ ಮಾಡಲಾಗಿದೆ.
ಸದ್ಯ ಫೈನಲ್ ಪಂದ್ಯ ವೀಕ್ಷಣೆ ಮಾಡಲು ಗ್ರಾಮದ ಜನರು ಕಾತುರದಿಂದ ಕಾಯುತ್ತಿದ್ದಾರೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…