Categories: ಐಪಿಎಲ್

IPL2023: ಮುಂಬೈಗೆ ಹ್ಯಾಟ್ರಿಕ್ ಗೆಲುವಿನ ಮಾಲೆ

ಹೈದರಾಬಾದ್ : ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನ ತೋರಿದ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಹೈದರಾಬಾದ್ ಸನ್ ರೈಸರ್ಸ್ ವಿರುದ್ಧ ಗೆದ್ದು ಹ್ಯಾಟ್ರಿಕ್ ಜಯದ ಮಾಲೆಯನ್ನು ಧರಿಸಿತು.

ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಉತ್ತಮವಾಗಿತ್ತು, ನಾಯಕ ರೋಹಿತ್ ಶರ್ಮಾ (28) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (38) ರನ್ ಗಳಿಸಿ ಭದ್ರ ಬುನಾದಿ ಹಾಕಿದರು.

ನಂತರ ಬಂದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಆರು ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ ಅಜೇಯ (64) ರನ್ ಗಳಿಸಿದರೆ ತಿಲಕ್ ವರ್ಮಾ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ (37) ರನ್ ಗಳಿಸಿ ತಂಡದ ಮೊತ್ತವನ್ನು 190 ರ ಗಡಿ ದಾಟಿಸಿದರು.

ಸ್ಪರ್ಧಾತ್ಮಕ ಮೊತ್ತ ಬೆನ್ನಟ್ಟಿದ ಹೈದರಾಬಾದ್ ಸನ್ ರೈಸರ್ಸ್ ತಂಡದ ಆರಂಭ ಉತ್ತಮವಾಗಿರಲಿಲ್ಲ, ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಹ್ಯಾರಿ ಬ್ರೂಕ್ (9) ಬೇಗನೆ ವಿಕೆಟ್ ಒಪ್ಪಿಸಿದರು, ನಂತರ ಬಂದ ತ್ರಿಪಾಠಿ (7) ಹೆಚ್ಚು ಹೊತ್ತು ನಿಲ್ಲಲಿಲ್ಲ ಇಬ್ಬರೂ ಸಹ ಬೆಹರ್ಡನ್ ಗೆ ವಿಕೆಟ್ ಒಪ್ಪಿಸಿದರು.

ಈ ಸಂದರ್ಭದಲ್ಲಿ ಜೊತೆಯಾದ ಕನ್ನಡಿಗ ಮಯಾಂಕ್ ಅಗರ್ವಾಲ್ (48) ಹಾಗೂ ನಾಯಕ ಮಾಕ್ರಮ್ (22) ತಂಡಕ್ಕೆ ಆಸರೆಯಾದರು, ಹೆನ್ರೀಚ್ ಕ್ಲಾಸೆನ್ (36) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಪಿಯೂಶ್ ಚಾವ್ಲಾ, ಮೆರಡಿತ್ ಹಾಗೂ ಬೆಹರ್ಡನ್ ತಲಾ ಎರಡು ವಿಕೆಟ್ ಪಡೆದರು, ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ನಲ್ಲಿ ಮಿಂಚಿದ್ದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

8 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

9 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

21 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

21 hours ago