Categories: ಐಪಿಎಲ್

IPL2023: ಮುಂಬೈಗೆ ಹ್ಯಾಟ್ರಿಕ್ ಗೆಲುವಿನ ಮಾಲೆ

ಹೈದರಾಬಾದ್ : ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನ ತೋರಿದ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಹೈದರಾಬಾದ್ ಸನ್ ರೈಸರ್ಸ್ ವಿರುದ್ಧ ಗೆದ್ದು ಹ್ಯಾಟ್ರಿಕ್ ಜಯದ ಮಾಲೆಯನ್ನು ಧರಿಸಿತು.

ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಉತ್ತಮವಾಗಿತ್ತು, ನಾಯಕ ರೋಹಿತ್ ಶರ್ಮಾ (28) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (38) ರನ್ ಗಳಿಸಿ ಭದ್ರ ಬುನಾದಿ ಹಾಕಿದರು.

ನಂತರ ಬಂದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಆರು ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ ಅಜೇಯ (64) ರನ್ ಗಳಿಸಿದರೆ ತಿಲಕ್ ವರ್ಮಾ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ (37) ರನ್ ಗಳಿಸಿ ತಂಡದ ಮೊತ್ತವನ್ನು 190 ರ ಗಡಿ ದಾಟಿಸಿದರು.

ಸ್ಪರ್ಧಾತ್ಮಕ ಮೊತ್ತ ಬೆನ್ನಟ್ಟಿದ ಹೈದರಾಬಾದ್ ಸನ್ ರೈಸರ್ಸ್ ತಂಡದ ಆರಂಭ ಉತ್ತಮವಾಗಿರಲಿಲ್ಲ, ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಹ್ಯಾರಿ ಬ್ರೂಕ್ (9) ಬೇಗನೆ ವಿಕೆಟ್ ಒಪ್ಪಿಸಿದರು, ನಂತರ ಬಂದ ತ್ರಿಪಾಠಿ (7) ಹೆಚ್ಚು ಹೊತ್ತು ನಿಲ್ಲಲಿಲ್ಲ ಇಬ್ಬರೂ ಸಹ ಬೆಹರ್ಡನ್ ಗೆ ವಿಕೆಟ್ ಒಪ್ಪಿಸಿದರು.

ಈ ಸಂದರ್ಭದಲ್ಲಿ ಜೊತೆಯಾದ ಕನ್ನಡಿಗ ಮಯಾಂಕ್ ಅಗರ್ವಾಲ್ (48) ಹಾಗೂ ನಾಯಕ ಮಾಕ್ರಮ್ (22) ತಂಡಕ್ಕೆ ಆಸರೆಯಾದರು, ಹೆನ್ರೀಚ್ ಕ್ಲಾಸೆನ್ (36) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಪಿಯೂಶ್ ಚಾವ್ಲಾ, ಮೆರಡಿತ್ ಹಾಗೂ ಬೆಹರ್ಡನ್ ತಲಾ ಎರಡು ವಿಕೆಟ್ ಪಡೆದರು, ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ನಲ್ಲಿ ಮಿಂಚಿದ್ದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

31 minutes ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

2 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

15 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

19 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago