ಹೈದರಾಬಾದ್ : ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನ ತೋರಿದ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಹೈದರಾಬಾದ್ ಸನ್ ರೈಸರ್ಸ್ ವಿರುದ್ಧ ಗೆದ್ದು ಹ್ಯಾಟ್ರಿಕ್ ಜಯದ ಮಾಲೆಯನ್ನು ಧರಿಸಿತು.
ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಉತ್ತಮವಾಗಿತ್ತು, ನಾಯಕ ರೋಹಿತ್ ಶರ್ಮಾ (28) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ (38) ರನ್ ಗಳಿಸಿ ಭದ್ರ ಬುನಾದಿ ಹಾಕಿದರು.
ನಂತರ ಬಂದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಆರು ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ ಅಜೇಯ (64) ರನ್ ಗಳಿಸಿದರೆ ತಿಲಕ್ ವರ್ಮಾ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ (37) ರನ್ ಗಳಿಸಿ ತಂಡದ ಮೊತ್ತವನ್ನು 190 ರ ಗಡಿ ದಾಟಿಸಿದರು.
ಈ ಸಂದರ್ಭದಲ್ಲಿ ಜೊತೆಯಾದ ಕನ್ನಡಿಗ ಮಯಾಂಕ್ ಅಗರ್ವಾಲ್ (48) ಹಾಗೂ ನಾಯಕ ಮಾಕ್ರಮ್ (22) ತಂಡಕ್ಕೆ ಆಸರೆಯಾದರು, ಹೆನ್ರೀಚ್ ಕ್ಲಾಸೆನ್ (36) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.
ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಪಿಯೂಶ್ ಚಾವ್ಲಾ, ಮೆರಡಿತ್ ಹಾಗೂ ಬೆಹರ್ಡನ್ ತಲಾ ಎರಡು ವಿಕೆಟ್ ಪಡೆದರು, ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ನಲ್ಲಿ ಮಿಂಚಿದ್ದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…