Categories: ಐಪಿಎಲ್

IPL2023: ಮುಂಬೈಗೆ ಹ್ಯಾಟ್ರಿಕ್ ಗೆಲುವಿನ ಮಾಲೆ

ಹೈದರಾಬಾದ್ : ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನ ತೋರಿದ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಹೈದರಾಬಾದ್ ಸನ್ ರೈಸರ್ಸ್ ವಿರುದ್ಧ ಗೆದ್ದು ಹ್ಯಾಟ್ರಿಕ್ ಜಯದ ಮಾಲೆಯನ್ನು ಧರಿಸಿತು.

ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಉತ್ತಮವಾಗಿತ್ತು, ನಾಯಕ ರೋಹಿತ್ ಶರ್ಮಾ (28) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (38) ರನ್ ಗಳಿಸಿ ಭದ್ರ ಬುನಾದಿ ಹಾಕಿದರು.

ನಂತರ ಬಂದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಆರು ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ ಅಜೇಯ (64) ರನ್ ಗಳಿಸಿದರೆ ತಿಲಕ್ ವರ್ಮಾ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ (37) ರನ್ ಗಳಿಸಿ ತಂಡದ ಮೊತ್ತವನ್ನು 190 ರ ಗಡಿ ದಾಟಿಸಿದರು.

ಸ್ಪರ್ಧಾತ್ಮಕ ಮೊತ್ತ ಬೆನ್ನಟ್ಟಿದ ಹೈದರಾಬಾದ್ ಸನ್ ರೈಸರ್ಸ್ ತಂಡದ ಆರಂಭ ಉತ್ತಮವಾಗಿರಲಿಲ್ಲ, ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಹ್ಯಾರಿ ಬ್ರೂಕ್ (9) ಬೇಗನೆ ವಿಕೆಟ್ ಒಪ್ಪಿಸಿದರು, ನಂತರ ಬಂದ ತ್ರಿಪಾಠಿ (7) ಹೆಚ್ಚು ಹೊತ್ತು ನಿಲ್ಲಲಿಲ್ಲ ಇಬ್ಬರೂ ಸಹ ಬೆಹರ್ಡನ್ ಗೆ ವಿಕೆಟ್ ಒಪ್ಪಿಸಿದರು.

ಈ ಸಂದರ್ಭದಲ್ಲಿ ಜೊತೆಯಾದ ಕನ್ನಡಿಗ ಮಯಾಂಕ್ ಅಗರ್ವಾಲ್ (48) ಹಾಗೂ ನಾಯಕ ಮಾಕ್ರಮ್ (22) ತಂಡಕ್ಕೆ ಆಸರೆಯಾದರು, ಹೆನ್ರೀಚ್ ಕ್ಲಾಸೆನ್ (36) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಪಿಯೂಶ್ ಚಾವ್ಲಾ, ಮೆರಡಿತ್ ಹಾಗೂ ಬೆಹರ್ಡನ್ ತಲಾ ಎರಡು ವಿಕೆಟ್ ಪಡೆದರು, ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ನಲ್ಲಿ ಮಿಂಚಿದ್ದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

27 minutes ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

3 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

23 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago