ತಿರುಪತಿ-ಕರ್ನಾಟಕ ಪ್ರವಾಸ ಬೆಳೆಸಲು ಐಆರ್ಟಿಸಿ ಮತ್ತೊಂದು ಹೊಸ ಪ್ರವಾಸ ಪ್ಯಾಕೇಜ್ ಅನ್ನು ಪರಿಚಯ ಮಾಡಿದೆ. ಕರ್ನಾಟಕದಲ್ಲಿರುವ ಸುಂದರವಾದ ತಾಣಗಳನ್ನು ನೋಡಬೇಕು ಎಂದು ಬಯಸುವವರು IRCTCಯಲ್ಲಿ ಮಾಹಿತಿಯನ್ನು ಕಲೆಹಾಕಬಹುದಾಗಿದೆ. ತಿರುಪತಿ – ಕರ್ನಾಟಕ ಪ್ಯಾಕೇಜ್ನಲ್ಲಿ ಕರ್ನಾಟಕದ ಆಧ್ಯಾತ್ಮಿಕ ಇತಿಹಾಸವುಳ್ಳ ಸುಂದರ ತಾಣಗಳಾದ, ಗೋಕರ್ಣ, ಕೊಲ್ಲೂರು, ಮುರುಡೇಶ್ವರ, ಶೃಂಗೇರಿ, ಉಡುಪಿಯಂತಹ ಸ್ಥಳಗಳು ಪಟ್ಟಿಯಲ್ಲಿವೆ. ಇವೆಲ್ಲವೂ ಆಧ್ಯಾತ್ಮಿಕ ಮತ್ತು ಮನರಂಜನಾತ್ಮಕ ತಾಣಗಳಾಗಿವೆ.
ಟೂರ್ ಪ್ಯಾಕೇಜ್ ವಿವರ:
ಈ ಪ್ರವಾಸವು 2023ರ ಜನವರಿ 17 ರಂದು ಪ್ರಾರಂಭ ಆಗುತ್ತದೆ. ಅಲ್ಲದೆ ವಾರದ ಪ್ರತಿ ಮಂಗಳವಾರದಂದು ಈ ಟೂರ್ ಪ್ಯಾಕೇಜ್ ಇರುತ್ತದೆ. ಈ ಪ್ಯಾಕೇಜ್ನ ಪ್ರಕಾರ 5 ರಾತ್ರಿ ಮತ್ತು 6 ದಿನಗಳ ದೀರ್ಘ ಪ್ರಯಾಣ ಆಗಿರುತ್ತದೆ. ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ದೇವಾಲಯ, ಸೆಂಟ್ ಮೇರಿಸ್ ಐಲ್ಯಾಂಡ್, ಮಲ್ಪೆ ಬೀಚ್, ಶಾರದಾಂಬ ದೇವಾಲಯ, ಕೊಲ್ಲೂರು ಮುಕಾಂಬಿಕ ದೇವಿ ದೇವಾಲಯ, ಮುರುಡೇಶ್ವರ ದೇವಾಲಯ, ಜೋಗ ಜಲಪಾತ, ಗೋಕರ್ಣ, ಗೋಕರ್ಣ ಬೀಚ್, ಮಂಗಳೂರಿನ ದೇವಾಲಯಗಳು, ಕೋಟೆಗಳನ್ನು ನೋಡಿಕೊಂಡು ರಾತ್ರಿ ರೈಲಿನಲ್ಲಿ ಹಿಂದಿರುಗಬಹುದಾಗಿದೆ.
ಟ್ಯೂರ್ ಪ್ಯಾಕೇಜ್ ಬುಕ್ ವೆಚ್ಚದ ವಿವರ
ಪ್ಯಾಕೇಜ್ನ್ನು ಬುಕ್ ಮಾಡಲು ಪ್ರತಿಯೊಬ್ಬರಿಗೆ 33,280 ರೂಪಾಯಿಗಳು ವೆಚ್ಚವಾಗುತ್ತದೆ. ಮತ್ತು ಇಬ್ಬರು ಒಟ್ಟಿಗೆ ಪ್ರಯಾಣಿಸಿದರೆ ಒಬ್ಬರಿಗೆ 18,570 ರೂಪಾಯಿಗಳು ವೆಚ್ಚ ತಗುಲುತ್ತದೆ. ಇದು ಕಂಪರ್ಟ್ ಕ್ಲಾಸ್ನ ಟಿಕೆಟ್ ಬೆಲೆಯಾಗಿದೆ. ಇಲ್ಲದಿದ್ದರೆ ನೀವು ಸ್ಟಾಂಡರ್ಡ್ ಕ್ಲಾಸ್ನಲ್ಲಿ ಪ್ರಯಾಣ ಮಾಡಲು ಬಯಸಿದರೆ ಒಬ್ಬರಿಗೆ 30,890 ರೂಪಾಯಿಗಳು ಆಗುತ್ತದೆ. ಇಬ್ಬರು ಒಟ್ಟಿಗೆ ಪ್ರಯಾಣ ಮಾಡಿದರೆ ಒಬ್ಬರಿಗೆ 16,180 ರೂಪಾಯಿ ಆಗುತ್ತದೆ. ಇನ್ನು 5 ರಿಂದ 11 ವರ್ಷದ ಮಕ್ಕಳಿಗೆ 7,330 ರೂಪಾಯಿ ನಿಗದಿ ಮಾಡಲಾಗಿದೆ. ಊಟ, ವಸತಿ ಎಲ್ಲವೂ ಪ್ಯಾಕೇಜ್ನಲ್ಲಿ ಒಳಗೊಂಡಿರುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು IRCTCಯ ಅಧಿಕೃತ ವೆಬ್ಸೈಟಿಗೆ ಹೋಗಿ ಪ್ಯಾಕೇಜ್ನ ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ.
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…