IRCTCಯಿಂದ ಕರ್ನಾಟಕ ಟೂರ್‌ ಪ್ಯಾಕೇಜ್‌ ಘೋಷಣೆ

ತಿರುಪತಿ-ಕರ್ನಾಟಕ ಪ್ರವಾಸ ಬೆಳೆಸಲು ಐಆರ್‌ಟಿಸಿ ಮತ್ತೊಂದು ಹೊಸ ಪ್ರವಾಸ ಪ್ಯಾಕೇಜ್‌ ಅನ್ನು ಪರಿಚಯ ಮಾಡಿದೆ. ಕರ್ನಾಟಕದಲ್ಲಿರುವ ಸುಂದರವಾದ ತಾಣಗಳನ್ನು ನೋಡಬೇಕು ಎಂದು ಬಯಸುವವರು IRCTCಯಲ್ಲಿ ಮಾಹಿತಿಯನ್ನು ಕಲೆಹಾಕಬಹುದಾಗಿದೆ. ತಿರುಪತಿ – ಕರ್ನಾಟಕ ಪ್ಯಾಕೇಜ್‌ನಲ್ಲಿ ಕರ್ನಾಟಕದ ಆಧ್ಯಾತ್ಮಿಕ ಇತಿಹಾಸವುಳ್ಳ ಸುಂದರ ತಾಣಗಳಾದ, ಗೋಕರ್ಣ, ಕೊಲ್ಲೂರು, ಮುರುಡೇಶ್ವರ, ಶೃಂಗೇರಿ, ಉಡುಪಿಯಂತಹ ಸ್ಥಳಗಳು ಪಟ್ಟಿಯಲ್ಲಿವೆ. ಇವೆಲ್ಲವೂ ಆಧ್ಯಾತ್ಮಿಕ ಮತ್ತು ಮನರಂಜನಾತ್ಮಕ ತಾಣಗಳಾಗಿವೆ.

ಟೂರ್ ಪ್ಯಾಕೇಜ್‌ ವಿವರ:

ಈ ಪ್ರವಾಸವು 2023ರ ಜನವರಿ 17 ರಂದು ಪ್ರಾರಂಭ ಆಗುತ್ತದೆ. ಅಲ್ಲದೆ ವಾರದ ಪ್ರತಿ ಮಂಗಳವಾರದಂದು ಈ ಟೂರ್‌ ಪ್ಯಾಕೇಜ್‌ ಇರುತ್ತದೆ. ಈ ಪ್ಯಾಕೇಜ್‌ನ ಪ್ರಕಾರ 5 ರಾತ್ರಿ ಮತ್ತು 6 ದಿನಗಳ ದೀರ್ಘ ಪ್ರಯಾಣ ಆಗಿರುತ್ತದೆ. ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ದೇವಾಲಯ, ಸೆಂಟ್‌ ಮೇರಿಸ್ ಐಲ್ಯಾಂಡ್, ಮಲ್ಪೆ ಬೀಚ್, ಶಾರದಾಂಬ ದೇವಾಲಯ, ಕೊಲ್ಲೂರು ಮುಕಾಂಬಿಕ ದೇವಿ ದೇವಾಲಯ, ಮುರುಡೇಶ್ವರ ದೇವಾಲಯ, ಜೋಗ ಜಲಪಾತ, ಗೋಕರ್ಣ, ಗೋಕರ್ಣ ಬೀಚ್, ಮಂಗಳೂರಿನ ದೇವಾಲಯಗಳು, ಕೋಟೆಗಳನ್ನು ನೋಡಿಕೊಂಡು ರಾತ್ರಿ ರೈಲಿನಲ್ಲಿ ಹಿಂದಿರುಗಬಹುದಾಗಿದೆ.

ಟ್ಯೂರ್ ಪ್ಯಾಕೇಜ್ ಬುಕ್ ವೆಚ್ಚದ ವಿವರ

ಪ್ಯಾಕೇಜ್‌ನ್ನು ಬುಕ್ ಮಾಡಲು ಪ್ರತಿಯೊಬ್ಬರಿಗೆ 33,280 ರೂಪಾಯಿಗಳು ವೆಚ್ಚವಾಗುತ್ತದೆ. ಮತ್ತು ಇಬ್ಬರು ಒಟ್ಟಿಗೆ ಪ್ರಯಾಣಿಸಿದರೆ ಒಬ್ಬರಿಗೆ 18,570 ರೂಪಾಯಿಗಳು ವೆಚ್ಚ ತಗುಲುತ್ತದೆ. ಇದು ಕಂಪರ್ಟ್‌ ಕ್ಲಾಸ್‌ನ ಟಿಕೆಟ್ ಬೆಲೆಯಾಗಿದೆ. ಇಲ್ಲದಿದ್ದರೆ ನೀವು ಸ್ಟಾಂಡರ್ಡ್ ಕ್ಲಾಸ್‌ನಲ್ಲಿ ಪ್ರಯಾಣ ಮಾಡಲು ಬಯಸಿದರೆ ಒಬ್ಬರಿಗೆ 30,890 ರೂಪಾಯಿಗಳು ಆಗುತ್ತದೆ. ಇಬ್ಬರು ಒಟ್ಟಿಗೆ ಪ್ರಯಾಣ ಮಾಡಿದರೆ ಒಬ್ಬರಿಗೆ 16,180 ರೂಪಾಯಿ ಆಗುತ್ತದೆ. ಇನ್ನು 5 ರಿಂದ 11 ವರ್ಷದ ಮಕ್ಕಳಿಗೆ 7,330 ರೂಪಾಯಿ ನಿಗದಿ ಮಾಡಲಾಗಿದೆ. ಊಟ, ವಸತಿ ಎಲ್ಲವೂ ಪ್ಯಾಕೇಜ್‌ನಲ್ಲಿ ಒಳಗೊಂಡಿರುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು IRCTCಯ ಅಧಿಕೃತ ವೆಬ್‌ಸೈಟಿಗೆ ಹೋಗಿ ಪ್ಯಾಕೇಜ್‌ನ ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

10 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

18 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

21 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

21 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago