IRCTCಯಿಂದ ಕರ್ನಾಟಕ ಟೂರ್‌ ಪ್ಯಾಕೇಜ್‌ ಘೋಷಣೆ

ತಿರುಪತಿ-ಕರ್ನಾಟಕ ಪ್ರವಾಸ ಬೆಳೆಸಲು ಐಆರ್‌ಟಿಸಿ ಮತ್ತೊಂದು ಹೊಸ ಪ್ರವಾಸ ಪ್ಯಾಕೇಜ್‌ ಅನ್ನು ಪರಿಚಯ ಮಾಡಿದೆ. ಕರ್ನಾಟಕದಲ್ಲಿರುವ ಸುಂದರವಾದ ತಾಣಗಳನ್ನು ನೋಡಬೇಕು ಎಂದು ಬಯಸುವವರು IRCTCಯಲ್ಲಿ ಮಾಹಿತಿಯನ್ನು ಕಲೆಹಾಕಬಹುದಾಗಿದೆ. ತಿರುಪತಿ – ಕರ್ನಾಟಕ ಪ್ಯಾಕೇಜ್‌ನಲ್ಲಿ ಕರ್ನಾಟಕದ ಆಧ್ಯಾತ್ಮಿಕ ಇತಿಹಾಸವುಳ್ಳ ಸುಂದರ ತಾಣಗಳಾದ, ಗೋಕರ್ಣ, ಕೊಲ್ಲೂರು, ಮುರುಡೇಶ್ವರ, ಶೃಂಗೇರಿ, ಉಡುಪಿಯಂತಹ ಸ್ಥಳಗಳು ಪಟ್ಟಿಯಲ್ಲಿವೆ. ಇವೆಲ್ಲವೂ ಆಧ್ಯಾತ್ಮಿಕ ಮತ್ತು ಮನರಂಜನಾತ್ಮಕ ತಾಣಗಳಾಗಿವೆ.

ಟೂರ್ ಪ್ಯಾಕೇಜ್‌ ವಿವರ:

ಈ ಪ್ರವಾಸವು 2023ರ ಜನವರಿ 17 ರಂದು ಪ್ರಾರಂಭ ಆಗುತ್ತದೆ. ಅಲ್ಲದೆ ವಾರದ ಪ್ರತಿ ಮಂಗಳವಾರದಂದು ಈ ಟೂರ್‌ ಪ್ಯಾಕೇಜ್‌ ಇರುತ್ತದೆ. ಈ ಪ್ಯಾಕೇಜ್‌ನ ಪ್ರಕಾರ 5 ರಾತ್ರಿ ಮತ್ತು 6 ದಿನಗಳ ದೀರ್ಘ ಪ್ರಯಾಣ ಆಗಿರುತ್ತದೆ. ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ದೇವಾಲಯ, ಸೆಂಟ್‌ ಮೇರಿಸ್ ಐಲ್ಯಾಂಡ್, ಮಲ್ಪೆ ಬೀಚ್, ಶಾರದಾಂಬ ದೇವಾಲಯ, ಕೊಲ್ಲೂರು ಮುಕಾಂಬಿಕ ದೇವಿ ದೇವಾಲಯ, ಮುರುಡೇಶ್ವರ ದೇವಾಲಯ, ಜೋಗ ಜಲಪಾತ, ಗೋಕರ್ಣ, ಗೋಕರ್ಣ ಬೀಚ್, ಮಂಗಳೂರಿನ ದೇವಾಲಯಗಳು, ಕೋಟೆಗಳನ್ನು ನೋಡಿಕೊಂಡು ರಾತ್ರಿ ರೈಲಿನಲ್ಲಿ ಹಿಂದಿರುಗಬಹುದಾಗಿದೆ.

ಟ್ಯೂರ್ ಪ್ಯಾಕೇಜ್ ಬುಕ್ ವೆಚ್ಚದ ವಿವರ

ಪ್ಯಾಕೇಜ್‌ನ್ನು ಬುಕ್ ಮಾಡಲು ಪ್ರತಿಯೊಬ್ಬರಿಗೆ 33,280 ರೂಪಾಯಿಗಳು ವೆಚ್ಚವಾಗುತ್ತದೆ. ಮತ್ತು ಇಬ್ಬರು ಒಟ್ಟಿಗೆ ಪ್ರಯಾಣಿಸಿದರೆ ಒಬ್ಬರಿಗೆ 18,570 ರೂಪಾಯಿಗಳು ವೆಚ್ಚ ತಗುಲುತ್ತದೆ. ಇದು ಕಂಪರ್ಟ್‌ ಕ್ಲಾಸ್‌ನ ಟಿಕೆಟ್ ಬೆಲೆಯಾಗಿದೆ. ಇಲ್ಲದಿದ್ದರೆ ನೀವು ಸ್ಟಾಂಡರ್ಡ್ ಕ್ಲಾಸ್‌ನಲ್ಲಿ ಪ್ರಯಾಣ ಮಾಡಲು ಬಯಸಿದರೆ ಒಬ್ಬರಿಗೆ 30,890 ರೂಪಾಯಿಗಳು ಆಗುತ್ತದೆ. ಇಬ್ಬರು ಒಟ್ಟಿಗೆ ಪ್ರಯಾಣ ಮಾಡಿದರೆ ಒಬ್ಬರಿಗೆ 16,180 ರೂಪಾಯಿ ಆಗುತ್ತದೆ. ಇನ್ನು 5 ರಿಂದ 11 ವರ್ಷದ ಮಕ್ಕಳಿಗೆ 7,330 ರೂಪಾಯಿ ನಿಗದಿ ಮಾಡಲಾಗಿದೆ. ಊಟ, ವಸತಿ ಎಲ್ಲವೂ ಪ್ಯಾಕೇಜ್‌ನಲ್ಲಿ ಒಳಗೊಂಡಿರುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು IRCTCಯ ಅಧಿಕೃತ ವೆಬ್‌ಸೈಟಿಗೆ ಹೋಗಿ ಪ್ಯಾಕೇಜ್‌ನ ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ.

Ramesh Babu

Journalist

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

23 minutes ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

1 hour ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

7 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

18 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

19 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

19 hours ago