IRCTCಯಿಂದ ಕರ್ನಾಟಕ ಟೂರ್‌ ಪ್ಯಾಕೇಜ್‌ ಘೋಷಣೆ

ತಿರುಪತಿ-ಕರ್ನಾಟಕ ಪ್ರವಾಸ ಬೆಳೆಸಲು ಐಆರ್‌ಟಿಸಿ ಮತ್ತೊಂದು ಹೊಸ ಪ್ರವಾಸ ಪ್ಯಾಕೇಜ್‌ ಅನ್ನು ಪರಿಚಯ ಮಾಡಿದೆ. ಕರ್ನಾಟಕದಲ್ಲಿರುವ ಸುಂದರವಾದ ತಾಣಗಳನ್ನು ನೋಡಬೇಕು ಎಂದು ಬಯಸುವವರು IRCTCಯಲ್ಲಿ ಮಾಹಿತಿಯನ್ನು ಕಲೆಹಾಕಬಹುದಾಗಿದೆ. ತಿರುಪತಿ – ಕರ್ನಾಟಕ ಪ್ಯಾಕೇಜ್‌ನಲ್ಲಿ ಕರ್ನಾಟಕದ ಆಧ್ಯಾತ್ಮಿಕ ಇತಿಹಾಸವುಳ್ಳ ಸುಂದರ ತಾಣಗಳಾದ, ಗೋಕರ್ಣ, ಕೊಲ್ಲೂರು, ಮುರುಡೇಶ್ವರ, ಶೃಂಗೇರಿ, ಉಡುಪಿಯಂತಹ ಸ್ಥಳಗಳು ಪಟ್ಟಿಯಲ್ಲಿವೆ. ಇವೆಲ್ಲವೂ ಆಧ್ಯಾತ್ಮಿಕ ಮತ್ತು ಮನರಂಜನಾತ್ಮಕ ತಾಣಗಳಾಗಿವೆ.

ಟೂರ್ ಪ್ಯಾಕೇಜ್‌ ವಿವರ:

ಈ ಪ್ರವಾಸವು 2023ರ ಜನವರಿ 17 ರಂದು ಪ್ರಾರಂಭ ಆಗುತ್ತದೆ. ಅಲ್ಲದೆ ವಾರದ ಪ್ರತಿ ಮಂಗಳವಾರದಂದು ಈ ಟೂರ್‌ ಪ್ಯಾಕೇಜ್‌ ಇರುತ್ತದೆ. ಈ ಪ್ಯಾಕೇಜ್‌ನ ಪ್ರಕಾರ 5 ರಾತ್ರಿ ಮತ್ತು 6 ದಿನಗಳ ದೀರ್ಘ ಪ್ರಯಾಣ ಆಗಿರುತ್ತದೆ. ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ದೇವಾಲಯ, ಸೆಂಟ್‌ ಮೇರಿಸ್ ಐಲ್ಯಾಂಡ್, ಮಲ್ಪೆ ಬೀಚ್, ಶಾರದಾಂಬ ದೇವಾಲಯ, ಕೊಲ್ಲೂರು ಮುಕಾಂಬಿಕ ದೇವಿ ದೇವಾಲಯ, ಮುರುಡೇಶ್ವರ ದೇವಾಲಯ, ಜೋಗ ಜಲಪಾತ, ಗೋಕರ್ಣ, ಗೋಕರ್ಣ ಬೀಚ್, ಮಂಗಳೂರಿನ ದೇವಾಲಯಗಳು, ಕೋಟೆಗಳನ್ನು ನೋಡಿಕೊಂಡು ರಾತ್ರಿ ರೈಲಿನಲ್ಲಿ ಹಿಂದಿರುಗಬಹುದಾಗಿದೆ.

ಟ್ಯೂರ್ ಪ್ಯಾಕೇಜ್ ಬುಕ್ ವೆಚ್ಚದ ವಿವರ

ಪ್ಯಾಕೇಜ್‌ನ್ನು ಬುಕ್ ಮಾಡಲು ಪ್ರತಿಯೊಬ್ಬರಿಗೆ 33,280 ರೂಪಾಯಿಗಳು ವೆಚ್ಚವಾಗುತ್ತದೆ. ಮತ್ತು ಇಬ್ಬರು ಒಟ್ಟಿಗೆ ಪ್ರಯಾಣಿಸಿದರೆ ಒಬ್ಬರಿಗೆ 18,570 ರೂಪಾಯಿಗಳು ವೆಚ್ಚ ತಗುಲುತ್ತದೆ. ಇದು ಕಂಪರ್ಟ್‌ ಕ್ಲಾಸ್‌ನ ಟಿಕೆಟ್ ಬೆಲೆಯಾಗಿದೆ. ಇಲ್ಲದಿದ್ದರೆ ನೀವು ಸ್ಟಾಂಡರ್ಡ್ ಕ್ಲಾಸ್‌ನಲ್ಲಿ ಪ್ರಯಾಣ ಮಾಡಲು ಬಯಸಿದರೆ ಒಬ್ಬರಿಗೆ 30,890 ರೂಪಾಯಿಗಳು ಆಗುತ್ತದೆ. ಇಬ್ಬರು ಒಟ್ಟಿಗೆ ಪ್ರಯಾಣ ಮಾಡಿದರೆ ಒಬ್ಬರಿಗೆ 16,180 ರೂಪಾಯಿ ಆಗುತ್ತದೆ. ಇನ್ನು 5 ರಿಂದ 11 ವರ್ಷದ ಮಕ್ಕಳಿಗೆ 7,330 ರೂಪಾಯಿ ನಿಗದಿ ಮಾಡಲಾಗಿದೆ. ಊಟ, ವಸತಿ ಎಲ್ಲವೂ ಪ್ಯಾಕೇಜ್‌ನಲ್ಲಿ ಒಳಗೊಂಡಿರುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು IRCTCಯ ಅಧಿಕೃತ ವೆಬ್‌ಸೈಟಿಗೆ ಹೋಗಿ ಪ್ಯಾಕೇಜ್‌ನ ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

10 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

11 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

12 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

13 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

15 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

15 hours ago