ತಿರುಪತಿ-ಕರ್ನಾಟಕ ಪ್ರವಾಸ ಬೆಳೆಸಲು ಐಆರ್ಟಿಸಿ ಮತ್ತೊಂದು ಹೊಸ ಪ್ರವಾಸ ಪ್ಯಾಕೇಜ್ ಅನ್ನು ಪರಿಚಯ ಮಾಡಿದೆ. ಕರ್ನಾಟಕದಲ್ಲಿರುವ ಸುಂದರವಾದ ತಾಣಗಳನ್ನು ನೋಡಬೇಕು ಎಂದು ಬಯಸುವವರು IRCTCಯಲ್ಲಿ ಮಾಹಿತಿಯನ್ನು ಕಲೆಹಾಕಬಹುದಾಗಿದೆ. ತಿರುಪತಿ – ಕರ್ನಾಟಕ ಪ್ಯಾಕೇಜ್ನಲ್ಲಿ ಕರ್ನಾಟಕದ ಆಧ್ಯಾತ್ಮಿಕ ಇತಿಹಾಸವುಳ್ಳ ಸುಂದರ ತಾಣಗಳಾದ, ಗೋಕರ್ಣ, ಕೊಲ್ಲೂರು, ಮುರುಡೇಶ್ವರ, ಶೃಂಗೇರಿ, ಉಡುಪಿಯಂತಹ ಸ್ಥಳಗಳು ಪಟ್ಟಿಯಲ್ಲಿವೆ. ಇವೆಲ್ಲವೂ ಆಧ್ಯಾತ್ಮಿಕ ಮತ್ತು ಮನರಂಜನಾತ್ಮಕ ತಾಣಗಳಾಗಿವೆ.
ಟೂರ್ ಪ್ಯಾಕೇಜ್ ವಿವರ:
ಈ ಪ್ರವಾಸವು 2023ರ ಜನವರಿ 17 ರಂದು ಪ್ರಾರಂಭ ಆಗುತ್ತದೆ. ಅಲ್ಲದೆ ವಾರದ ಪ್ರತಿ ಮಂಗಳವಾರದಂದು ಈ ಟೂರ್ ಪ್ಯಾಕೇಜ್ ಇರುತ್ತದೆ. ಈ ಪ್ಯಾಕೇಜ್ನ ಪ್ರಕಾರ 5 ರಾತ್ರಿ ಮತ್ತು 6 ದಿನಗಳ ದೀರ್ಘ ಪ್ರಯಾಣ ಆಗಿರುತ್ತದೆ. ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ದೇವಾಲಯ, ಸೆಂಟ್ ಮೇರಿಸ್ ಐಲ್ಯಾಂಡ್, ಮಲ್ಪೆ ಬೀಚ್, ಶಾರದಾಂಬ ದೇವಾಲಯ, ಕೊಲ್ಲೂರು ಮುಕಾಂಬಿಕ ದೇವಿ ದೇವಾಲಯ, ಮುರುಡೇಶ್ವರ ದೇವಾಲಯ, ಜೋಗ ಜಲಪಾತ, ಗೋಕರ್ಣ, ಗೋಕರ್ಣ ಬೀಚ್, ಮಂಗಳೂರಿನ ದೇವಾಲಯಗಳು, ಕೋಟೆಗಳನ್ನು ನೋಡಿಕೊಂಡು ರಾತ್ರಿ ರೈಲಿನಲ್ಲಿ ಹಿಂದಿರುಗಬಹುದಾಗಿದೆ.
ಟ್ಯೂರ್ ಪ್ಯಾಕೇಜ್ ಬುಕ್ ವೆಚ್ಚದ ವಿವರ
ಪ್ಯಾಕೇಜ್ನ್ನು ಬುಕ್ ಮಾಡಲು ಪ್ರತಿಯೊಬ್ಬರಿಗೆ 33,280 ರೂಪಾಯಿಗಳು ವೆಚ್ಚವಾಗುತ್ತದೆ. ಮತ್ತು ಇಬ್ಬರು ಒಟ್ಟಿಗೆ ಪ್ರಯಾಣಿಸಿದರೆ ಒಬ್ಬರಿಗೆ 18,570 ರೂಪಾಯಿಗಳು ವೆಚ್ಚ ತಗುಲುತ್ತದೆ. ಇದು ಕಂಪರ್ಟ್ ಕ್ಲಾಸ್ನ ಟಿಕೆಟ್ ಬೆಲೆಯಾಗಿದೆ. ಇಲ್ಲದಿದ್ದರೆ ನೀವು ಸ್ಟಾಂಡರ್ಡ್ ಕ್ಲಾಸ್ನಲ್ಲಿ ಪ್ರಯಾಣ ಮಾಡಲು ಬಯಸಿದರೆ ಒಬ್ಬರಿಗೆ 30,890 ರೂಪಾಯಿಗಳು ಆಗುತ್ತದೆ. ಇಬ್ಬರು ಒಟ್ಟಿಗೆ ಪ್ರಯಾಣ ಮಾಡಿದರೆ ಒಬ್ಬರಿಗೆ 16,180 ರೂಪಾಯಿ ಆಗುತ್ತದೆ. ಇನ್ನು 5 ರಿಂದ 11 ವರ್ಷದ ಮಕ್ಕಳಿಗೆ 7,330 ರೂಪಾಯಿ ನಿಗದಿ ಮಾಡಲಾಗಿದೆ. ಊಟ, ವಸತಿ ಎಲ್ಲವೂ ಪ್ಯಾಕೇಜ್ನಲ್ಲಿ ಒಳಗೊಂಡಿರುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು IRCTCಯ ಅಧಿಕೃತ ವೆಬ್ಸೈಟಿಗೆ ಹೋಗಿ ಪ್ಯಾಕೇಜ್ನ ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…