ತಿರುಪತಿ-ಕರ್ನಾಟಕ ಪ್ರವಾಸ ಬೆಳೆಸಲು ಐಆರ್ಟಿಸಿ ಮತ್ತೊಂದು ಹೊಸ ಪ್ರವಾಸ ಪ್ಯಾಕೇಜ್ ಅನ್ನು ಪರಿಚಯ ಮಾಡಿದೆ. ಕರ್ನಾಟಕದಲ್ಲಿರುವ ಸುಂದರವಾದ ತಾಣಗಳನ್ನು ನೋಡಬೇಕು ಎಂದು ಬಯಸುವವರು IRCTCಯಲ್ಲಿ ಮಾಹಿತಿಯನ್ನು ಕಲೆಹಾಕಬಹುದಾಗಿದೆ. ತಿರುಪತಿ – ಕರ್ನಾಟಕ ಪ್ಯಾಕೇಜ್ನಲ್ಲಿ ಕರ್ನಾಟಕದ ಆಧ್ಯಾತ್ಮಿಕ ಇತಿಹಾಸವುಳ್ಳ ಸುಂದರ ತಾಣಗಳಾದ, ಗೋಕರ್ಣ, ಕೊಲ್ಲೂರು, ಮುರುಡೇಶ್ವರ, ಶೃಂಗೇರಿ, ಉಡುಪಿಯಂತಹ ಸ್ಥಳಗಳು ಪಟ್ಟಿಯಲ್ಲಿವೆ. ಇವೆಲ್ಲವೂ ಆಧ್ಯಾತ್ಮಿಕ ಮತ್ತು ಮನರಂಜನಾತ್ಮಕ ತಾಣಗಳಾಗಿವೆ.
ಟೂರ್ ಪ್ಯಾಕೇಜ್ ವಿವರ:
ಈ ಪ್ರವಾಸವು 2023ರ ಜನವರಿ 17 ರಂದು ಪ್ರಾರಂಭ ಆಗುತ್ತದೆ. ಅಲ್ಲದೆ ವಾರದ ಪ್ರತಿ ಮಂಗಳವಾರದಂದು ಈ ಟೂರ್ ಪ್ಯಾಕೇಜ್ ಇರುತ್ತದೆ. ಈ ಪ್ಯಾಕೇಜ್ನ ಪ್ರಕಾರ 5 ರಾತ್ರಿ ಮತ್ತು 6 ದಿನಗಳ ದೀರ್ಘ ಪ್ರಯಾಣ ಆಗಿರುತ್ತದೆ. ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ದೇವಾಲಯ, ಸೆಂಟ್ ಮೇರಿಸ್ ಐಲ್ಯಾಂಡ್, ಮಲ್ಪೆ ಬೀಚ್, ಶಾರದಾಂಬ ದೇವಾಲಯ, ಕೊಲ್ಲೂರು ಮುಕಾಂಬಿಕ ದೇವಿ ದೇವಾಲಯ, ಮುರುಡೇಶ್ವರ ದೇವಾಲಯ, ಜೋಗ ಜಲಪಾತ, ಗೋಕರ್ಣ, ಗೋಕರ್ಣ ಬೀಚ್, ಮಂಗಳೂರಿನ ದೇವಾಲಯಗಳು, ಕೋಟೆಗಳನ್ನು ನೋಡಿಕೊಂಡು ರಾತ್ರಿ ರೈಲಿನಲ್ಲಿ ಹಿಂದಿರುಗಬಹುದಾಗಿದೆ.
ಟ್ಯೂರ್ ಪ್ಯಾಕೇಜ್ ಬುಕ್ ವೆಚ್ಚದ ವಿವರ
ಪ್ಯಾಕೇಜ್ನ್ನು ಬುಕ್ ಮಾಡಲು ಪ್ರತಿಯೊಬ್ಬರಿಗೆ 33,280 ರೂಪಾಯಿಗಳು ವೆಚ್ಚವಾಗುತ್ತದೆ. ಮತ್ತು ಇಬ್ಬರು ಒಟ್ಟಿಗೆ ಪ್ರಯಾಣಿಸಿದರೆ ಒಬ್ಬರಿಗೆ 18,570 ರೂಪಾಯಿಗಳು ವೆಚ್ಚ ತಗುಲುತ್ತದೆ. ಇದು ಕಂಪರ್ಟ್ ಕ್ಲಾಸ್ನ ಟಿಕೆಟ್ ಬೆಲೆಯಾಗಿದೆ. ಇಲ್ಲದಿದ್ದರೆ ನೀವು ಸ್ಟಾಂಡರ್ಡ್ ಕ್ಲಾಸ್ನಲ್ಲಿ ಪ್ರಯಾಣ ಮಾಡಲು ಬಯಸಿದರೆ ಒಬ್ಬರಿಗೆ 30,890 ರೂಪಾಯಿಗಳು ಆಗುತ್ತದೆ. ಇಬ್ಬರು ಒಟ್ಟಿಗೆ ಪ್ರಯಾಣ ಮಾಡಿದರೆ ಒಬ್ಬರಿಗೆ 16,180 ರೂಪಾಯಿ ಆಗುತ್ತದೆ. ಇನ್ನು 5 ರಿಂದ 11 ವರ್ಷದ ಮಕ್ಕಳಿಗೆ 7,330 ರೂಪಾಯಿ ನಿಗದಿ ಮಾಡಲಾಗಿದೆ. ಊಟ, ವಸತಿ ಎಲ್ಲವೂ ಪ್ಯಾಕೇಜ್ನಲ್ಲಿ ಒಳಗೊಂಡಿರುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು IRCTCಯ ಅಧಿಕೃತ ವೆಬ್ಸೈಟಿಗೆ ಹೋಗಿ ಪ್ಯಾಕೇಜ್ನ ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…