IRCTCಯಿಂದ ಕರ್ನಾಟಕ ಟೂರ್‌ ಪ್ಯಾಕೇಜ್‌ ಘೋಷಣೆ

ತಿರುಪತಿ-ಕರ್ನಾಟಕ ಪ್ರವಾಸ ಬೆಳೆಸಲು ಐಆರ್‌ಟಿಸಿ ಮತ್ತೊಂದು ಹೊಸ ಪ್ರವಾಸ ಪ್ಯಾಕೇಜ್‌ ಅನ್ನು ಪರಿಚಯ ಮಾಡಿದೆ. ಕರ್ನಾಟಕದಲ್ಲಿರುವ ಸುಂದರವಾದ ತಾಣಗಳನ್ನು ನೋಡಬೇಕು ಎಂದು ಬಯಸುವವರು IRCTCಯಲ್ಲಿ ಮಾಹಿತಿಯನ್ನು ಕಲೆಹಾಕಬಹುದಾಗಿದೆ. ತಿರುಪತಿ – ಕರ್ನಾಟಕ ಪ್ಯಾಕೇಜ್‌ನಲ್ಲಿ ಕರ್ನಾಟಕದ ಆಧ್ಯಾತ್ಮಿಕ ಇತಿಹಾಸವುಳ್ಳ ಸುಂದರ ತಾಣಗಳಾದ, ಗೋಕರ್ಣ, ಕೊಲ್ಲೂರು, ಮುರುಡೇಶ್ವರ, ಶೃಂಗೇರಿ, ಉಡುಪಿಯಂತಹ ಸ್ಥಳಗಳು ಪಟ್ಟಿಯಲ್ಲಿವೆ. ಇವೆಲ್ಲವೂ ಆಧ್ಯಾತ್ಮಿಕ ಮತ್ತು ಮನರಂಜನಾತ್ಮಕ ತಾಣಗಳಾಗಿವೆ.

ಟೂರ್ ಪ್ಯಾಕೇಜ್‌ ವಿವರ:

ಈ ಪ್ರವಾಸವು 2023ರ ಜನವರಿ 17 ರಂದು ಪ್ರಾರಂಭ ಆಗುತ್ತದೆ. ಅಲ್ಲದೆ ವಾರದ ಪ್ರತಿ ಮಂಗಳವಾರದಂದು ಈ ಟೂರ್‌ ಪ್ಯಾಕೇಜ್‌ ಇರುತ್ತದೆ. ಈ ಪ್ಯಾಕೇಜ್‌ನ ಪ್ರಕಾರ 5 ರಾತ್ರಿ ಮತ್ತು 6 ದಿನಗಳ ದೀರ್ಘ ಪ್ರಯಾಣ ಆಗಿರುತ್ತದೆ. ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ದೇವಾಲಯ, ಸೆಂಟ್‌ ಮೇರಿಸ್ ಐಲ್ಯಾಂಡ್, ಮಲ್ಪೆ ಬೀಚ್, ಶಾರದಾಂಬ ದೇವಾಲಯ, ಕೊಲ್ಲೂರು ಮುಕಾಂಬಿಕ ದೇವಿ ದೇವಾಲಯ, ಮುರುಡೇಶ್ವರ ದೇವಾಲಯ, ಜೋಗ ಜಲಪಾತ, ಗೋಕರ್ಣ, ಗೋಕರ್ಣ ಬೀಚ್, ಮಂಗಳೂರಿನ ದೇವಾಲಯಗಳು, ಕೋಟೆಗಳನ್ನು ನೋಡಿಕೊಂಡು ರಾತ್ರಿ ರೈಲಿನಲ್ಲಿ ಹಿಂದಿರುಗಬಹುದಾಗಿದೆ.

ಟ್ಯೂರ್ ಪ್ಯಾಕೇಜ್ ಬುಕ್ ವೆಚ್ಚದ ವಿವರ

ಪ್ಯಾಕೇಜ್‌ನ್ನು ಬುಕ್ ಮಾಡಲು ಪ್ರತಿಯೊಬ್ಬರಿಗೆ 33,280 ರೂಪಾಯಿಗಳು ವೆಚ್ಚವಾಗುತ್ತದೆ. ಮತ್ತು ಇಬ್ಬರು ಒಟ್ಟಿಗೆ ಪ್ರಯಾಣಿಸಿದರೆ ಒಬ್ಬರಿಗೆ 18,570 ರೂಪಾಯಿಗಳು ವೆಚ್ಚ ತಗುಲುತ್ತದೆ. ಇದು ಕಂಪರ್ಟ್‌ ಕ್ಲಾಸ್‌ನ ಟಿಕೆಟ್ ಬೆಲೆಯಾಗಿದೆ. ಇಲ್ಲದಿದ್ದರೆ ನೀವು ಸ್ಟಾಂಡರ್ಡ್ ಕ್ಲಾಸ್‌ನಲ್ಲಿ ಪ್ರಯಾಣ ಮಾಡಲು ಬಯಸಿದರೆ ಒಬ್ಬರಿಗೆ 30,890 ರೂಪಾಯಿಗಳು ಆಗುತ್ತದೆ. ಇಬ್ಬರು ಒಟ್ಟಿಗೆ ಪ್ರಯಾಣ ಮಾಡಿದರೆ ಒಬ್ಬರಿಗೆ 16,180 ರೂಪಾಯಿ ಆಗುತ್ತದೆ. ಇನ್ನು 5 ರಿಂದ 11 ವರ್ಷದ ಮಕ್ಕಳಿಗೆ 7,330 ರೂಪಾಯಿ ನಿಗದಿ ಮಾಡಲಾಗಿದೆ. ಊಟ, ವಸತಿ ಎಲ್ಲವೂ ಪ್ಯಾಕೇಜ್‌ನಲ್ಲಿ ಒಳಗೊಂಡಿರುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು IRCTCಯ ಅಧಿಕೃತ ವೆಬ್‌ಸೈಟಿಗೆ ಹೋಗಿ ಪ್ಯಾಕೇಜ್‌ನ ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

1 hour ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

2 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

14 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

15 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

18 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago