ತಿರುಪತಿ-ಕರ್ನಾಟಕ ಪ್ರವಾಸ ಬೆಳೆಸಲು ಐಆರ್ಟಿಸಿ ಮತ್ತೊಂದು ಹೊಸ ಪ್ರವಾಸ ಪ್ಯಾಕೇಜ್ ಅನ್ನು ಪರಿಚಯ ಮಾಡಿದೆ. ಕರ್ನಾಟಕದಲ್ಲಿರುವ ಸುಂದರವಾದ ತಾಣಗಳನ್ನು ನೋಡಬೇಕು ಎಂದು ಬಯಸುವವರು IRCTCಯಲ್ಲಿ ಮಾಹಿತಿಯನ್ನು ಕಲೆಹಾಕಬಹುದಾಗಿದೆ. ತಿರುಪತಿ – ಕರ್ನಾಟಕ ಪ್ಯಾಕೇಜ್ನಲ್ಲಿ ಕರ್ನಾಟಕದ ಆಧ್ಯಾತ್ಮಿಕ ಇತಿಹಾಸವುಳ್ಳ ಸುಂದರ ತಾಣಗಳಾದ, ಗೋಕರ್ಣ, ಕೊಲ್ಲೂರು, ಮುರುಡೇಶ್ವರ, ಶೃಂಗೇರಿ, ಉಡುಪಿಯಂತಹ ಸ್ಥಳಗಳು ಪಟ್ಟಿಯಲ್ಲಿವೆ. ಇವೆಲ್ಲವೂ ಆಧ್ಯಾತ್ಮಿಕ ಮತ್ತು ಮನರಂಜನಾತ್ಮಕ ತಾಣಗಳಾಗಿವೆ.
ಟೂರ್ ಪ್ಯಾಕೇಜ್ ವಿವರ:
ಈ ಪ್ರವಾಸವು 2023ರ ಜನವರಿ 17 ರಂದು ಪ್ರಾರಂಭ ಆಗುತ್ತದೆ. ಅಲ್ಲದೆ ವಾರದ ಪ್ರತಿ ಮಂಗಳವಾರದಂದು ಈ ಟೂರ್ ಪ್ಯಾಕೇಜ್ ಇರುತ್ತದೆ. ಈ ಪ್ಯಾಕೇಜ್ನ ಪ್ರಕಾರ 5 ರಾತ್ರಿ ಮತ್ತು 6 ದಿನಗಳ ದೀರ್ಘ ಪ್ರಯಾಣ ಆಗಿರುತ್ತದೆ. ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ದೇವಾಲಯ, ಸೆಂಟ್ ಮೇರಿಸ್ ಐಲ್ಯಾಂಡ್, ಮಲ್ಪೆ ಬೀಚ್, ಶಾರದಾಂಬ ದೇವಾಲಯ, ಕೊಲ್ಲೂರು ಮುಕಾಂಬಿಕ ದೇವಿ ದೇವಾಲಯ, ಮುರುಡೇಶ್ವರ ದೇವಾಲಯ, ಜೋಗ ಜಲಪಾತ, ಗೋಕರ್ಣ, ಗೋಕರ್ಣ ಬೀಚ್, ಮಂಗಳೂರಿನ ದೇವಾಲಯಗಳು, ಕೋಟೆಗಳನ್ನು ನೋಡಿಕೊಂಡು ರಾತ್ರಿ ರೈಲಿನಲ್ಲಿ ಹಿಂದಿರುಗಬಹುದಾಗಿದೆ.
ಟ್ಯೂರ್ ಪ್ಯಾಕೇಜ್ ಬುಕ್ ವೆಚ್ಚದ ವಿವರ
ಪ್ಯಾಕೇಜ್ನ್ನು ಬುಕ್ ಮಾಡಲು ಪ್ರತಿಯೊಬ್ಬರಿಗೆ 33,280 ರೂಪಾಯಿಗಳು ವೆಚ್ಚವಾಗುತ್ತದೆ. ಮತ್ತು ಇಬ್ಬರು ಒಟ್ಟಿಗೆ ಪ್ರಯಾಣಿಸಿದರೆ ಒಬ್ಬರಿಗೆ 18,570 ರೂಪಾಯಿಗಳು ವೆಚ್ಚ ತಗುಲುತ್ತದೆ. ಇದು ಕಂಪರ್ಟ್ ಕ್ಲಾಸ್ನ ಟಿಕೆಟ್ ಬೆಲೆಯಾಗಿದೆ. ಇಲ್ಲದಿದ್ದರೆ ನೀವು ಸ್ಟಾಂಡರ್ಡ್ ಕ್ಲಾಸ್ನಲ್ಲಿ ಪ್ರಯಾಣ ಮಾಡಲು ಬಯಸಿದರೆ ಒಬ್ಬರಿಗೆ 30,890 ರೂಪಾಯಿಗಳು ಆಗುತ್ತದೆ. ಇಬ್ಬರು ಒಟ್ಟಿಗೆ ಪ್ರಯಾಣ ಮಾಡಿದರೆ ಒಬ್ಬರಿಗೆ 16,180 ರೂಪಾಯಿ ಆಗುತ್ತದೆ. ಇನ್ನು 5 ರಿಂದ 11 ವರ್ಷದ ಮಕ್ಕಳಿಗೆ 7,330 ರೂಪಾಯಿ ನಿಗದಿ ಮಾಡಲಾಗಿದೆ. ಊಟ, ವಸತಿ ಎಲ್ಲವೂ ಪ್ಯಾಕೇಜ್ನಲ್ಲಿ ಒಳಗೊಂಡಿರುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು IRCTCಯ ಅಧಿಕೃತ ವೆಬ್ಸೈಟಿಗೆ ಹೋಗಿ ಪ್ಯಾಕೇಜ್ನ ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…