KIALನಲ್ಲಿ ಅ.19, 20ರಂದು ವಿಪತ್ತು ನಿರ್ವಹಣೆ ಕುರಿತು ಅಣುಕು ಪ್ರದರ್ಶನ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅ.19 ಹಾಗೂ 20 ರಂದು ನಡೆಯುವ ಜಿಲ್ಲಾಮಟ್ಟದ ಟೇಬಲ್ ಟಾಪ್ ಎಕ್ಸೈಸ್ ಮತ್ತು ಅಣುಕು ಪ್ರದರ್ಶನ ಕಾರ್ಯಕ್ರಮಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ವಿಪತ್ತು ನಿರ್ವಹಣೆ ಕುರಿತು ಆಯಾ ಇಲಾಖೆಯ ಜವಬ್ದಾರಿಯನ್ನು ತಿಳಿದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ “ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ table top exercise ಮತ್ತು ಅಣುಕು ಪ್ರದರ್ಶನದ” ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಡಿಯಲ್ಲಿ ಬರುವ ಎಲ್ಲಾ ಇಲಾಖೆಗಳ ಮುಖ್ಯಸ್ಥರುಗಳು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಶೋಕ ಅಲ್ಫಾ-3 ಸಭಾಂಗಣದಲ್ಲಿ ನಡೆಯಲಿರುವ  ಸಭೆಗೆ ಹಾಜರಿದ್ದು ತಮ್ಮ ತಮ್ಮ ಇಲಾಖೆಗಳ ಪಾತ್ರ ಹಾಗೂ ಜವಾಬ್ದಾರಿಗಳು, ಸಹಕಾರ ಸಹಯೋಗದೊಂದಿಗೆ ಕಾರ್ಯನಿರ್ವಹಿಸುವ ಕುರಿತು ಅರಿತುಕೊಳ್ಳಬೇಕು.

ಅಲ್ಲದೆ ಟೇಬಲ್ ಟಾಪ್ ಸಂಬಂಧಿಸಿದಂತೆ ಅಗ್ನಿಶಾಮಕದಳ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಗಳು ಇಲಾಖೆಗಳ ಪಾತ್ರ ಮತ್ತು ಜವಾಬ್ದಾರಿ, ಸಂಪನ್ಮೂಲ ವ್ಯವಸ್ಥೆ, ಜನ ಜಾನುವಾರುಗಳ ಸಂರಕ್ಷಣೆ ಕುರಿತು ಪಿ.ಪಿ.ಟಿ ಮೂಲಕ ಸಭೆಗೆ ಪ್ರಸ್ತುತ ಪಡಿಸುವಂತೆ ಸೂಚಿಸಿ ಅಕ್ಟೋಬರ್ 20ರಂದು ನಡೆಯಲಿರುವ ಅಣುಕು ಪ್ರದರ್ಶನದ ದಿನದಂದು ಜಿಲ್ಲೆಯ ಎಲ್ಲಾ ಇಲಾಖೆ ಮುಖ್ಯಸ್ಥರು ತಮ್ಮ ತಮ್ಮ ಇಲಾಖೆ ಮುಖ್ಯಸ್ಥರಿಗೆ ವಹಿಸಿರುವ ಜವಾಬ್ದಾರಿಗಳನ್ನು ಚಾಚು ತಪ್ಪದೆ ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು.

ಸಭೆಯಲ್ಲಿ ವಿಪತ್ತು ನಿರ್ವಹಣಾ ಪರಿಣಿತರಾದ ಬಸವರಾಜು ವಿ, ವಿಪತ್ತು ಸ್ಪಂದನ ವ್ಯವಸ್ಥೆ ತರಬೇತುದಾರ ಮತ್ತು ಬೋಧಕರಾದ ರಘು ಬಿ ವಿ, ಅಗ್ನಿಶಾಮಕ ದಳ, ಪೋಲಿಸ್ ಇಲಾಖೆ ಸಿಬ್ಬಂದಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

6 minutes ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

4 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

5 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

7 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

7 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

11 hours ago